BREAKING NEWS

ಸಂಸತ್‌ ಸ್ಥಾನದಿಂದ ಅನರ್ಹ: ರಾಹಲ್‌ಗೆ ಒಂದು ನ್ಯಾಯ ಬಿಜೆಪಿಗೆ ಒಂದು ನ್ಯಾಯ: ಖರ್ಗೆ ಆರೋಪ

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್‍ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಲಾಗಿದ್ದು, ಅದೇ ರೀತಿ ಬಿಜೆಪಿಯ ಸಂಸದರೊಬ್ಬರು ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಸಂಸತ್ ಕಲಾಪದಲ್ಲಿ ಭಾಗವಹಿಸುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ಸೇರಿದ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಗುಜರಾತ್‍ನ ಸಂಸದರಿಗೆ ಅಲ್ಲಿನ ನ್ಯಾಯಾಲಯ 3 ವರ್ಷ ಶಿಕ್ಷೆ ವಿಧಿಸಿದೆ. ಸೆಷನ್ಸ್ ಕೋರ್ಟ್, ಹೈಕೋರ್ಟ್ ಸಂಸದರ ಮೇಲ್ಮನವಿ ತಿರಸ್ಕರಿಸಿವೆ. ಸುಪ್ರೀಂಕೋರ್ಟ್ ಸಂಸದರಿಗೆ ಐದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಆದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಆಕ್ಷೇಪಿಸಿದರು.

ಆದರೆ ರಾಹುಲ್ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಅನರ್ಹಗೊಳಿಸಲಾಗಿದೆ. ಅದಾನಿ ಷೇರು ಮೌಲ್ಯ ಹೆಚ್ಚಳ ಹಗರಣದಲ್ಲಿ ಸತ್ಯ ಹೇಳಿದ ಹಾಗೂ ಪ್ರಧಾನಿಯನ್ನು ಪ್ರಶ್ನಿಸಿದ ಕಾರಣಕ್ಕೆ ರಾಹುಲ್‍ಗಾಂಧಿಯನ್ನು ಮಿಂಚಿನ ವೇಗದಲ್ಲಿ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು.

ರಾಹುಲ್‍ಗಾಂಧಿಗೆ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿದ 24 ಗಂಟೆಯಲ್ಲೇ ಅನರ್ಹತೆಯ ಅಧಿಸೂಚನೆ ಜಾರಿಯಾಗುತ್ತದೆ, ಸಂಸತ್ ಕಲಾಪದಿಂದ ಹೊರಗಿಡಲಾಗುತ್ತದೆ. ಇದನ್ನು ನೋಡಿದರೆ ಯಾರ ಮೇಲೆ ಒತ್ತಡವಿದೆ, ಯಾರಿಗೆ ವಿನಾಯಿತಿ ಸಿಗುತ್ತಿದೆ ಎಂಬುದು ಅರಿವಾಗುತ್ತದೆ ಎಂದರು.

ಅಮ್ರೇಲಿ ಕ್ಷೇತ್ರದ ಸಂಸದ ನರನ್ ಕಚ್ಚಡಿಯಾ ಅವರು 2013ರ ಜನವರಿ 1ರಂದು ನಾಗರೀಕ ಆಸ್ಪತ್ರೆಯ ಡಾ.ಧಂಜಿದಭಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದಕ್ಕೂ ಮೊದಲು ಸರ್ಕಾರಿ ಆಸ್ಪತ್ರೆಯ ವೈದ್ಯರು ಬೇರೊಂದು ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಾವು ಹೇಳಿದವರಿಗೆ ಚಿಕಿತ್ಸೆ ನೀಡಲು ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷ ಮಧುಬೇನ್ ಜೋಷಿ ಅವರ ಪುತ್ರ ರವಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದರು.

ಘಟನೆಯ ಬಳಿಕ ಮಧುಬೇನ್ ಸ್ಥಳಕ್ಕೆ ತೆರಳಿ ಮತ್ತಷ್ಟು ರಂಪಾಟ ಮಾಡಿದ್ದರು. ಅಲ್ಲಿಂದಲೇ ಸಂಸದರಿಗೆ ದೂರು ನೀಡಿದ್ದರು. ಸಂಸದರು ಕರೆ ಮಾಡಿದಾಗ ವೈದ್ಯರು ಮಾತನಾಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಸ್ಥಳಕ್ಕೆ ಧಾವಿಸಿದ್ದ ಸಂಸದರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಇತ್ತು.

ವಿಚಾರಣೆ ನಡೆಸಿದ ಅಮ್ರೇಲಿ ವಿಶೇಷ ನ್ಯಾಯಾಲಯ ಸಂಸದ ಕಚ್ಚಡಿಯಾ, ಅವರ ಚಾಲಕ ರಮೇಶ್ ಸೇರಿ ಇತರ ಮೂವರು, ಕಿರಿಟ್ ವಂಜಾ, ಮಧುಬೇನ್, ಆಕೆಯ ಮಗ ರವಿ ಅವರನ್ನು ದೋಷಿಗಳೆಂದು ಘೋಷಿಸಿತ್ತು. ಸಂಸದರಿಗೆ ಮೂರು ವರ್ಷಗಳ ಶಿಕ್ಷೆ ಮತ್ತು 35 ಸಾವಿರ ರೂಪಾಯಿ ದಂಡ ವಿಧಿಸಿತ್ತು, ಉಳಿದ ಆರೋಪಿಗಳಿಗೆ ಆರು ತಿಂಗಳ ಶಿಕ್ಷೆ ವಿಧಿಸಿ 2016ರ ಏಪ್ರಿಲ್‍ನಲ್ಲಿ ತೀರ್ಪು ಪ್ರಕಟಿಸಿತ್ತು.

ಬಳಿಕವೂ ಕಚ್ಚಡಿಯಾ 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಕ್ರಮವಾರಿ ಎರಡು ಮತ್ತು ಮೂರು ಬಾರಿ ಸಂಸದರಾಗಿದ್ದಾರೆ. ಪ್ರಸ್ತುತ 17ನೇ ಸಂಸತ್‍ನಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯಿ ಸಮಿತಿ, ಶಿಷ್ಠಚಾರ ಸಮಿತಿ, ರೈಲ್ವೆ ಸಂಸದೀಯ ಸಮಿತಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್‍ಗಾಂಧಿಗೆ ಶಿಕ್ಷೆಯಾದ ತಕ್ಷಣ ಕ್ರಮ ಕೈಗೊಂಡಂತೆ, ಬಿಜೆಪಿ ಸಂಸದರ ವಿರುದ್ಧ ಕ್ರಮ ಏಕಿಲ್ಲ ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ.

andolanait

Recent Posts

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

6 mins ago

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ…

15 mins ago

ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿಟ್ಟ ಅನುದಾನ ಎಷ್ಟು ಗೊತ್ತಾ.?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ…

26 mins ago

ರಾಜ್ಯ ಬಜೆಟ್‌: ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ…

34 mins ago

ರಾಜ್ಯ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ…

1 hour ago

ರಾಜ್ಯ ಬಜೆಟ್‌: 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…

1 hour ago