BREAKING NEWS

ಧಾರ್ಮಿಕ ಆಚರಣೆಗೆ ಅಡ್ಡಿ: ನಂಜುಂಡೇಶ್ವರನ ಭಕ್ತರಿಂದ ಅಹೋರಾತ್ರಿ ಧರಣಿ

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೂರಾರು ಶ್ರೀಕಂಠೇಶ್ವರ ಭಕ್ತ ಮಂಡಳಿ ಆಹೋರಾತ್ರಿ ಧರಣಿ ನಡೆಸಿದರು.

ನಗರದ ರಾಕ್ಷಸ ಮಂಟಪ ವೃತ್ತವೆಂದೇ ಹೆಸರುವಾಸಿಯಾಗಿರುವ ಸ್ಥಳದಲ್ಲಿ ನೂರಾರು ವರದಷಗಳಿಂದ ನಡೆದುಕೊಂಡು ಬಂದಿದ್ದಂತ ಅಂಧಾಕಾಸುರನ ಸಂಹಾರ ಸಾಂಪ್ರಧಾಯಿಕ ಆಚರಣೆಯನ್ನು ನಿಲ್ಲಿಸುವಂತೆ ದಸಂಸ ಕಾರ್ಯಕರ್ತರು ಅಡ್ಡಿಪಡಿಸಿದ್ದಲದೇ, ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಗೆ ನೀರು ಎರಚುವ ಕೆಲಸ ಮಾಡಿದ್ದರು.

ಈ ವೇಳೆ ಸ್ಥಳದಲ್ಲಿದ್ದ ನೂರಾರು ಭಕ್ತುರು ಹಾಗೂ ದಸಂಸ ಕಾರ್ಯಕರ್ತರ ನಡುವೆ ಮಾತನಿ ಜಕಮಕಿ ಉಂಟಾಯಿತು. ಬಳಿಕ ಭಕ್ತರು ಹಾಗೂ ಪೊಲೀಸರ ಭದ್ರತೆಯ ನಡುವೆ ಸಂಪ್ರದಾಯಿಕ ಆಚರಣೆ ನೆರವೇರಿತು. ಈ ಬಳಿಕ ಮಾತಿನ ಚಕಮಕಿ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಸ್ಥಳದಲ್ಲಿದ್ದ ಪೊಲೀಸರು ಲಘು ಲಾಟಿಪ್ರಹಾರ ನಡೆಸಿದರು.

ಇದನ್ನು ಖಂಡಿಸಿದ ಭಕ್ತಮಂಡಳಿ, ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನಡೆದ ಅಪಚಾರ ಹಾಗೂ ಭಕ್ತರ ಮೇಲೆ ನಡೆದ ಲಾಟಿಪ್ರಹಾರವನ್ನು ಖಂಡಿಸಿ ನಗರದ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಸ್ಥಳದಲ್ಲೇ ಧರಣಿ ಕೂತು, ಈ ಕೂಡಲೇ ದಸಂಸ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿದರು.

ಧರಣಿ ನಿರತರಾಗಿದ್ದ ಭಕ್ತ ಮಂಡಳಿ, ಸ್ಥಳಿಯ ಶಾಸಕರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.  ಮಧ್ಯರಾತ್ರಿ ಸುಮಾರು 2ಗಂಟೆ ವರೆಗೂ ನಡೆದ ಪ್ರತಿಭಟನೆಯ ಬಳಿಕ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಗದೀಶ್‌ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಭಕ್ತಮಂಡಳಿಯವರು ದೂರು ಸಲ್ಲಿಸಿದರು.

ಇಂದು ಸಂಜೆ 6ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಿದಿದ್ದಲ್ಲಿ ಮತ್ತೆ ಇಂದು ಸಂಜೆ ಧರಣಿ ಮುಂದುವರೆಸುವಂತೆ ಶ್ರೀಕಂಠೇಶ್ವರ ಸ್ವಾಮಿ ಭಕ್ತಮಂಡಳಿ ಪೊಲೀಸರಿಗೆ ಎಚ್ಚರಿಕೆ ನೀಡಿದರು.

 

ನಮ್ಮ ಪೂರ್ವಿಕರಿಗೆ ಅವಮಾನವಾಗಲು ಬಿಡುವುದಿಲ್ಲ – ದಸಂಸ: ಶತಶತಮಾನಗಳಿಂದ ದಲಿತರ ಮೇಲೆ ನಡೆದುಕೊಂಡು ಬಂದಿರುವ ಶೋಷಣೆಗಳನ್ನು ಮುಂದುವರೆಸಲು ನಾವು ಬಿಡುವುದಿಲ್ಲ ಎಂದು ದಸಂಸ ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಅಂಧಕಾಸುರನಾಗಲಿ, ಮಹಿಷಾಸುರನಾಗಲಿ ಇವರೆಲ್ಲಾ ನಮ್ಮ ಪೂರ್ವಿಕರು. ಅವರು ರಾಕ್ಷಸರಲ್ಲ. ಈ ರೀತಿಯ ಆಚರಣೆಗಳ ಮೂಲಕ ನಮ್ಮ ಪೂರ್ವಿಕರಿಗೆ ಅಪಮಾನ ಮಾಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

7 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

8 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

8 hours ago