BREAKING NEWS

ಧಾರ್ಮಿಕ ಆಚರಣೆಗೆ ಅಡ್ಡಿ: ನಂಜುಂಡೇಶ್ವರನ ಭಕ್ತರಿಂದ ಅಹೋರಾತ್ರಿ ಧರಣಿ

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೂರಾರು ಶ್ರೀಕಂಠೇಶ್ವರ ಭಕ್ತ ಮಂಡಳಿ ಆಹೋರಾತ್ರಿ ಧರಣಿ ನಡೆಸಿದರು.

ನಗರದ ರಾಕ್ಷಸ ಮಂಟಪ ವೃತ್ತವೆಂದೇ ಹೆಸರುವಾಸಿಯಾಗಿರುವ ಸ್ಥಳದಲ್ಲಿ ನೂರಾರು ವರದಷಗಳಿಂದ ನಡೆದುಕೊಂಡು ಬಂದಿದ್ದಂತ ಅಂಧಾಕಾಸುರನ ಸಂಹಾರ ಸಾಂಪ್ರಧಾಯಿಕ ಆಚರಣೆಯನ್ನು ನಿಲ್ಲಿಸುವಂತೆ ದಸಂಸ ಕಾರ್ಯಕರ್ತರು ಅಡ್ಡಿಪಡಿಸಿದ್ದಲದೇ, ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಗೆ ನೀರು ಎರಚುವ ಕೆಲಸ ಮಾಡಿದ್ದರು.

ಈ ವೇಳೆ ಸ್ಥಳದಲ್ಲಿದ್ದ ನೂರಾರು ಭಕ್ತುರು ಹಾಗೂ ದಸಂಸ ಕಾರ್ಯಕರ್ತರ ನಡುವೆ ಮಾತನಿ ಜಕಮಕಿ ಉಂಟಾಯಿತು. ಬಳಿಕ ಭಕ್ತರು ಹಾಗೂ ಪೊಲೀಸರ ಭದ್ರತೆಯ ನಡುವೆ ಸಂಪ್ರದಾಯಿಕ ಆಚರಣೆ ನೆರವೇರಿತು. ಈ ಬಳಿಕ ಮಾತಿನ ಚಕಮಕಿ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಸ್ಥಳದಲ್ಲಿದ್ದ ಪೊಲೀಸರು ಲಘು ಲಾಟಿಪ್ರಹಾರ ನಡೆಸಿದರು.

ಇದನ್ನು ಖಂಡಿಸಿದ ಭಕ್ತಮಂಡಳಿ, ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನಡೆದ ಅಪಚಾರ ಹಾಗೂ ಭಕ್ತರ ಮೇಲೆ ನಡೆದ ಲಾಟಿಪ್ರಹಾರವನ್ನು ಖಂಡಿಸಿ ನಗರದ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಸ್ಥಳದಲ್ಲೇ ಧರಣಿ ಕೂತು, ಈ ಕೂಡಲೇ ದಸಂಸ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿದರು.

ಧರಣಿ ನಿರತರಾಗಿದ್ದ ಭಕ್ತ ಮಂಡಳಿ, ಸ್ಥಳಿಯ ಶಾಸಕರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.  ಮಧ್ಯರಾತ್ರಿ ಸುಮಾರು 2ಗಂಟೆ ವರೆಗೂ ನಡೆದ ಪ್ರತಿಭಟನೆಯ ಬಳಿಕ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಗದೀಶ್‌ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಭಕ್ತಮಂಡಳಿಯವರು ದೂರು ಸಲ್ಲಿಸಿದರು.

ಇಂದು ಸಂಜೆ 6ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಿದಿದ್ದಲ್ಲಿ ಮತ್ತೆ ಇಂದು ಸಂಜೆ ಧರಣಿ ಮುಂದುವರೆಸುವಂತೆ ಶ್ರೀಕಂಠೇಶ್ವರ ಸ್ವಾಮಿ ಭಕ್ತಮಂಡಳಿ ಪೊಲೀಸರಿಗೆ ಎಚ್ಚರಿಕೆ ನೀಡಿದರು.

 

ನಮ್ಮ ಪೂರ್ವಿಕರಿಗೆ ಅವಮಾನವಾಗಲು ಬಿಡುವುದಿಲ್ಲ – ದಸಂಸ: ಶತಶತಮಾನಗಳಿಂದ ದಲಿತರ ಮೇಲೆ ನಡೆದುಕೊಂಡು ಬಂದಿರುವ ಶೋಷಣೆಗಳನ್ನು ಮುಂದುವರೆಸಲು ನಾವು ಬಿಡುವುದಿಲ್ಲ ಎಂದು ದಸಂಸ ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಅಂಧಕಾಸುರನಾಗಲಿ, ಮಹಿಷಾಸುರನಾಗಲಿ ಇವರೆಲ್ಲಾ ನಮ್ಮ ಪೂರ್ವಿಕರು. ಅವರು ರಾಕ್ಷಸರಲ್ಲ. ಈ ರೀತಿಯ ಆಚರಣೆಗಳ ಮೂಲಕ ನಮ್ಮ ಪೂರ್ವಿಕರಿಗೆ ಅಪಮಾನ ಮಾಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

2 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

2 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

2 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

2 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 hours ago