BREAKING NEWS

ಧಾರ್ಮಿಕ ಆಚರಣೆಗೆ ಅಡ್ಡಿ: ನಂಜುಂಡೇಶ್ವರನ ಭಕ್ತರಿಂದ ಅಹೋರಾತ್ರಿ ಧರಣಿ

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೂರಾರು ಶ್ರೀಕಂಠೇಶ್ವರ ಭಕ್ತ ಮಂಡಳಿ ಆಹೋರಾತ್ರಿ ಧರಣಿ ನಡೆಸಿದರು.

ನಗರದ ರಾಕ್ಷಸ ಮಂಟಪ ವೃತ್ತವೆಂದೇ ಹೆಸರುವಾಸಿಯಾಗಿರುವ ಸ್ಥಳದಲ್ಲಿ ನೂರಾರು ವರದಷಗಳಿಂದ ನಡೆದುಕೊಂಡು ಬಂದಿದ್ದಂತ ಅಂಧಾಕಾಸುರನ ಸಂಹಾರ ಸಾಂಪ್ರಧಾಯಿಕ ಆಚರಣೆಯನ್ನು ನಿಲ್ಲಿಸುವಂತೆ ದಸಂಸ ಕಾರ್ಯಕರ್ತರು ಅಡ್ಡಿಪಡಿಸಿದ್ದಲದೇ, ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಗೆ ನೀರು ಎರಚುವ ಕೆಲಸ ಮಾಡಿದ್ದರು.

ಈ ವೇಳೆ ಸ್ಥಳದಲ್ಲಿದ್ದ ನೂರಾರು ಭಕ್ತುರು ಹಾಗೂ ದಸಂಸ ಕಾರ್ಯಕರ್ತರ ನಡುವೆ ಮಾತನಿ ಜಕಮಕಿ ಉಂಟಾಯಿತು. ಬಳಿಕ ಭಕ್ತರು ಹಾಗೂ ಪೊಲೀಸರ ಭದ್ರತೆಯ ನಡುವೆ ಸಂಪ್ರದಾಯಿಕ ಆಚರಣೆ ನೆರವೇರಿತು. ಈ ಬಳಿಕ ಮಾತಿನ ಚಕಮಕಿ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಸ್ಥಳದಲ್ಲಿದ್ದ ಪೊಲೀಸರು ಲಘು ಲಾಟಿಪ್ರಹಾರ ನಡೆಸಿದರು.

ಇದನ್ನು ಖಂಡಿಸಿದ ಭಕ್ತಮಂಡಳಿ, ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನಡೆದ ಅಪಚಾರ ಹಾಗೂ ಭಕ್ತರ ಮೇಲೆ ನಡೆದ ಲಾಟಿಪ್ರಹಾರವನ್ನು ಖಂಡಿಸಿ ನಗರದ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಸ್ಥಳದಲ್ಲೇ ಧರಣಿ ಕೂತು, ಈ ಕೂಡಲೇ ದಸಂಸ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿದರು.

ಧರಣಿ ನಿರತರಾಗಿದ್ದ ಭಕ್ತ ಮಂಡಳಿ, ಸ್ಥಳಿಯ ಶಾಸಕರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.  ಮಧ್ಯರಾತ್ರಿ ಸುಮಾರು 2ಗಂಟೆ ವರೆಗೂ ನಡೆದ ಪ್ರತಿಭಟನೆಯ ಬಳಿಕ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಗದೀಶ್‌ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಭಕ್ತಮಂಡಳಿಯವರು ದೂರು ಸಲ್ಲಿಸಿದರು.

ಇಂದು ಸಂಜೆ 6ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಿದಿದ್ದಲ್ಲಿ ಮತ್ತೆ ಇಂದು ಸಂಜೆ ಧರಣಿ ಮುಂದುವರೆಸುವಂತೆ ಶ್ರೀಕಂಠೇಶ್ವರ ಸ್ವಾಮಿ ಭಕ್ತಮಂಡಳಿ ಪೊಲೀಸರಿಗೆ ಎಚ್ಚರಿಕೆ ನೀಡಿದರು.

 

ನಮ್ಮ ಪೂರ್ವಿಕರಿಗೆ ಅವಮಾನವಾಗಲು ಬಿಡುವುದಿಲ್ಲ – ದಸಂಸ: ಶತಶತಮಾನಗಳಿಂದ ದಲಿತರ ಮೇಲೆ ನಡೆದುಕೊಂಡು ಬಂದಿರುವ ಶೋಷಣೆಗಳನ್ನು ಮುಂದುವರೆಸಲು ನಾವು ಬಿಡುವುದಿಲ್ಲ ಎಂದು ದಸಂಸ ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಅಂಧಕಾಸುರನಾಗಲಿ, ಮಹಿಷಾಸುರನಾಗಲಿ ಇವರೆಲ್ಲಾ ನಮ್ಮ ಪೂರ್ವಿಕರು. ಅವರು ರಾಕ್ಷಸರಲ್ಲ. ಈ ರೀತಿಯ ಆಚರಣೆಗಳ ಮೂಲಕ ನಮ್ಮ ಪೂರ್ವಿಕರಿಗೆ ಅಪಮಾನ ಮಾಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

3 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

4 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

4 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

11 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

11 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

11 hours ago