BREAKING NEWS

ಧಾರ್ಮಿಕ ಆಚರಣೆಗೆ ಅಡ್ಡಿ: ನಂಜುಂಡೇಶ್ವರನ ಭಕ್ತರಿಂದ ಅಹೋರಾತ್ರಿ ಧರಣಿ

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೂರಾರು ಶ್ರೀಕಂಠೇಶ್ವರ ಭಕ್ತ ಮಂಡಳಿ ಆಹೋರಾತ್ರಿ ಧರಣಿ ನಡೆಸಿದರು.

ನಗರದ ರಾಕ್ಷಸ ಮಂಟಪ ವೃತ್ತವೆಂದೇ ಹೆಸರುವಾಸಿಯಾಗಿರುವ ಸ್ಥಳದಲ್ಲಿ ನೂರಾರು ವರದಷಗಳಿಂದ ನಡೆದುಕೊಂಡು ಬಂದಿದ್ದಂತ ಅಂಧಾಕಾಸುರನ ಸಂಹಾರ ಸಾಂಪ್ರಧಾಯಿಕ ಆಚರಣೆಯನ್ನು ನಿಲ್ಲಿಸುವಂತೆ ದಸಂಸ ಕಾರ್ಯಕರ್ತರು ಅಡ್ಡಿಪಡಿಸಿದ್ದಲದೇ, ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಗೆ ನೀರು ಎರಚುವ ಕೆಲಸ ಮಾಡಿದ್ದರು.

ಈ ವೇಳೆ ಸ್ಥಳದಲ್ಲಿದ್ದ ನೂರಾರು ಭಕ್ತುರು ಹಾಗೂ ದಸಂಸ ಕಾರ್ಯಕರ್ತರ ನಡುವೆ ಮಾತನಿ ಜಕಮಕಿ ಉಂಟಾಯಿತು. ಬಳಿಕ ಭಕ್ತರು ಹಾಗೂ ಪೊಲೀಸರ ಭದ್ರತೆಯ ನಡುವೆ ಸಂಪ್ರದಾಯಿಕ ಆಚರಣೆ ನೆರವೇರಿತು. ಈ ಬಳಿಕ ಮಾತಿನ ಚಕಮಕಿ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಸ್ಥಳದಲ್ಲಿದ್ದ ಪೊಲೀಸರು ಲಘು ಲಾಟಿಪ್ರಹಾರ ನಡೆಸಿದರು.

ಇದನ್ನು ಖಂಡಿಸಿದ ಭಕ್ತಮಂಡಳಿ, ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನಡೆದ ಅಪಚಾರ ಹಾಗೂ ಭಕ್ತರ ಮೇಲೆ ನಡೆದ ಲಾಟಿಪ್ರಹಾರವನ್ನು ಖಂಡಿಸಿ ನಗರದ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಸ್ಥಳದಲ್ಲೇ ಧರಣಿ ಕೂತು, ಈ ಕೂಡಲೇ ದಸಂಸ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿದರು.

ಧರಣಿ ನಿರತರಾಗಿದ್ದ ಭಕ್ತ ಮಂಡಳಿ, ಸ್ಥಳಿಯ ಶಾಸಕರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.  ಮಧ್ಯರಾತ್ರಿ ಸುಮಾರು 2ಗಂಟೆ ವರೆಗೂ ನಡೆದ ಪ್ರತಿಭಟನೆಯ ಬಳಿಕ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಜಗದೀಶ್‌ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಭಕ್ತಮಂಡಳಿಯವರು ದೂರು ಸಲ್ಲಿಸಿದರು.

ಇಂದು ಸಂಜೆ 6ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಿದಿದ್ದಲ್ಲಿ ಮತ್ತೆ ಇಂದು ಸಂಜೆ ಧರಣಿ ಮುಂದುವರೆಸುವಂತೆ ಶ್ರೀಕಂಠೇಶ್ವರ ಸ್ವಾಮಿ ಭಕ್ತಮಂಡಳಿ ಪೊಲೀಸರಿಗೆ ಎಚ್ಚರಿಕೆ ನೀಡಿದರು.

 

ನಮ್ಮ ಪೂರ್ವಿಕರಿಗೆ ಅವಮಾನವಾಗಲು ಬಿಡುವುದಿಲ್ಲ – ದಸಂಸ: ಶತಶತಮಾನಗಳಿಂದ ದಲಿತರ ಮೇಲೆ ನಡೆದುಕೊಂಡು ಬಂದಿರುವ ಶೋಷಣೆಗಳನ್ನು ಮುಂದುವರೆಸಲು ನಾವು ಬಿಡುವುದಿಲ್ಲ ಎಂದು ದಸಂಸ ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಅಂಧಕಾಸುರನಾಗಲಿ, ಮಹಿಷಾಸುರನಾಗಲಿ ಇವರೆಲ್ಲಾ ನಮ್ಮ ಪೂರ್ವಿಕರು. ಅವರು ರಾಕ್ಷಸರಲ್ಲ. ಈ ರೀತಿಯ ಆಚರಣೆಗಳ ಮೂಲಕ ನಮ್ಮ ಪೂರ್ವಿಕರಿಗೆ ಅಪಮಾನ ಮಾಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

10 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago