BREAKING NEWS

ಜಿಲ್ಲಾಮಟ್ಟದ ಜನತಾ ದರ್ಶನ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಮಸ್ಯೆ ಬಗೆಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನತಾ ದರ್ಶನ ಹಿನ್ನೆಲೆ ತಾಲ್ಲೂಕಿನಲ್ಲಿ ಹೋಬಳಿವಾರು ಅರ್ಜಿ ಕರೆದಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 167 ಅರ್ಜಿದಾರರ ಅಹವಾಲನ್ನು ಸ್ವೀಕರಿಸಿ, ಸಮಸ್ಯೆ ಆಲಿಸಿದರು. ಅದಲ್ಲದೆ, ಅರ್ಜಿ ಸಲ್ಲಿಸದೆ ಇದ್ದಂತಹ ಜನರನ್ನೂ ಕರೆದು ಅವರ ಕುಂದು ಕೊರತೆಗಳನ್ನು ವಿಚಾರಿಸಿದರು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಸೂಚನೆ ನೀಡಿದ್ದರು. ಅದರಂತೆ ಮೊದಲಿಗೆ ಮೈಸೂರಿನಲ್ಲಿ ನಡೆಸಿ ಸ್ವೀಕರಿಸಿದ್ದ ಅಹವಾಲುಗಳಲ್ಲಿ ಶೇ.98 ರಷ್ಟನ್ನು ಬಗೆಹರಿಸಲಾಗಿದೆ ಎಂದು ಹೇಳಿದರು.

ಮೊನ್ನೆ ನಮ್ಮ ಮುಖ್ಯಮಂತ್ರಿಗಳು ನಡೆಸಿದ ಜನಸ್ಪಂದನ ಕಾರ್ಯಕ್ರದಲ್ಲಿ ಮುಗ್ಧಜನರು ತಮ್ಮ ನೋವನ್ನು ತೋಡಿಕೊಂಡ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿ ವರ್ಗಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಇದರ ಅಂಗವಾಗಿ ತಿ.ನರಸೀಪುರ ತಾಲ್ಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಕಷ್ಟವನ್ನು ಕೇಳಲಾಗುತ್ತಿದೆ ಎಂದು ತಿಳಿಸಿದರು.

ಆಡಳಿತ ಚುರುಕುಗೊಳಿಸಿ, ಜನಪರವಾದ ಆಡಳಿತದ ವಾತಾವರಣ ಸೃಷ್ಟಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಸಂಕಷ್ಟದಲ್ಲಿರುವ ಜನರು ನೇರವಾಗಿ ಬಂದು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಡಿ.15 ನಂತರ ಎಲ್ಲಾ ತಾಲ್ಲೂಕಿನಲ್ಲೂ ಜನತದರ್ಶನ: ವಿಧಾನ ಸಭೆಯ ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 15 ನಂತರ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಿ ಜ‌ನರ ಸಮಸ್ಯೆಗಳನ್ನು ಆಲಿಸಲಾಗುವುದು. ಜಿಲ್ಲಾಡಳಿತ, ತಾಲ್ಲೂಕು ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರು ತಿಂಗಳುಗಟ್ಟಲೆ ತಮ್ಮ ಸಮಸ್ಯೆಗಳ ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದು ಎಂಬುದು ಮೂಲ ಉದ್ದೇಶವಾಗಿದೆ ಎಂದರು.

ವಂಚಿತ ಗೃಹಲಕ್ಷ್ಮಿಯರ ಖಾತೆಗೆ ಹಣ ಗ್ಯಾರಂಟಿ: ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ 528 ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂಬ ಮಾಹಿತಿ ಇದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚಿಸಿದ್ದೇನೆ. ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡಲಾಗುವುದು ಎಂದು ತಿಳಿಸಿದರು.

andolanait

Recent Posts

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

58 mins ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

1 hour ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

2 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

3 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

4 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

4 hours ago