BREAKING NEWS

ಜಿಲ್ಲಾಮಟ್ಟದ ಜನತಾ ದರ್ಶನ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಮಸ್ಯೆ ಬಗೆಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನತಾ ದರ್ಶನ ಹಿನ್ನೆಲೆ ತಾಲ್ಲೂಕಿನಲ್ಲಿ ಹೋಬಳಿವಾರು ಅರ್ಜಿ ಕರೆದಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 167 ಅರ್ಜಿದಾರರ ಅಹವಾಲನ್ನು ಸ್ವೀಕರಿಸಿ, ಸಮಸ್ಯೆ ಆಲಿಸಿದರು. ಅದಲ್ಲದೆ, ಅರ್ಜಿ ಸಲ್ಲಿಸದೆ ಇದ್ದಂತಹ ಜನರನ್ನೂ ಕರೆದು ಅವರ ಕುಂದು ಕೊರತೆಗಳನ್ನು ವಿಚಾರಿಸಿದರು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಸೂಚನೆ ನೀಡಿದ್ದರು. ಅದರಂತೆ ಮೊದಲಿಗೆ ಮೈಸೂರಿನಲ್ಲಿ ನಡೆಸಿ ಸ್ವೀಕರಿಸಿದ್ದ ಅಹವಾಲುಗಳಲ್ಲಿ ಶೇ.98 ರಷ್ಟನ್ನು ಬಗೆಹರಿಸಲಾಗಿದೆ ಎಂದು ಹೇಳಿದರು.

ಮೊನ್ನೆ ನಮ್ಮ ಮುಖ್ಯಮಂತ್ರಿಗಳು ನಡೆಸಿದ ಜನಸ್ಪಂದನ ಕಾರ್ಯಕ್ರದಲ್ಲಿ ಮುಗ್ಧಜನರು ತಮ್ಮ ನೋವನ್ನು ತೋಡಿಕೊಂಡ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿ ವರ್ಗಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಇದರ ಅಂಗವಾಗಿ ತಿ.ನರಸೀಪುರ ತಾಲ್ಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಕಷ್ಟವನ್ನು ಕೇಳಲಾಗುತ್ತಿದೆ ಎಂದು ತಿಳಿಸಿದರು.

ಆಡಳಿತ ಚುರುಕುಗೊಳಿಸಿ, ಜನಪರವಾದ ಆಡಳಿತದ ವಾತಾವರಣ ಸೃಷ್ಟಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಸಂಕಷ್ಟದಲ್ಲಿರುವ ಜನರು ನೇರವಾಗಿ ಬಂದು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಡಿ.15 ನಂತರ ಎಲ್ಲಾ ತಾಲ್ಲೂಕಿನಲ್ಲೂ ಜನತದರ್ಶನ: ವಿಧಾನ ಸಭೆಯ ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 15 ನಂತರ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಿ ಜ‌ನರ ಸಮಸ್ಯೆಗಳನ್ನು ಆಲಿಸಲಾಗುವುದು. ಜಿಲ್ಲಾಡಳಿತ, ತಾಲ್ಲೂಕು ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರು ತಿಂಗಳುಗಟ್ಟಲೆ ತಮ್ಮ ಸಮಸ್ಯೆಗಳ ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದು ಎಂಬುದು ಮೂಲ ಉದ್ದೇಶವಾಗಿದೆ ಎಂದರು.

ವಂಚಿತ ಗೃಹಲಕ್ಷ್ಮಿಯರ ಖಾತೆಗೆ ಹಣ ಗ್ಯಾರಂಟಿ: ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ 528 ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂಬ ಮಾಹಿತಿ ಇದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚಿಸಿದ್ದೇನೆ. ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡಲಾಗುವುದು ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

14 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

16 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

18 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

23 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago