ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ಬೆಳಗ್ಗಿನ ಜಾವ ಆರು ಗಂಟೆ ಸುಮಾರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಹಳೇ ಪ್ರಾಧಿಕಾರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂದಿ, ವಾಹನ ಚಾಲಕರು ಬೆಂಕಿಯನ್ನು ಕಂಡು ತಮ್ಮ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಬೆಂಕಿ ದುರಂತದಲ್ಲಿ ಪೀಠೋಪಕರಣಗಳು,ಸೈಬರ್ ಟಿ.ವಿ., ಮಕ್ಕಳ ಡ್ರಾಯಿಂಗ್ ಪರಿಕರಗಳು ನಾಶವಾಗಿವೆ. ಅಗ್ನಿಶಾಮಕ ಠಾಣೆಗೆ ಕರೆ ಬಂದ ಮೇರೆಗೆ ಸುಮಾರು ಐದಾರು ಅಗ್ನಿಶಾಮಕ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ಸಂಬಂಧ ಆಂದೋಲನ ಡಿಜಿಟಲ್ ತಂಡಕ್ಕೆ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಅವರು, ಕಚೇರಿಯ ಟೇಬಲ್,ಕುರ್ಚಿ,ಸೈಬರ್ ಟಿ.ವಿ.,ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಮೇಜು,ಕುರ್ಚಿ ಇತ್ಯಾದಿ ಪೀಠೋಪಕರಣಗಳು, ಮಕ್ಕಳ ಡ್ರಾಯಿಂಗ್ ಇತ್ಯಾದಿ ಪರಿಕರಗಳು ಸುಟ್ಟು ನಾಶವಾಗಿವೆ. ಎ ಮತ್ತು ಸಿ ಬ್ಲಾಕ್ ನಲ್ಲಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಬೆಂಕಿ ಹರಡಿಲ್ಲ. ಹಳೆಯ ಕಟ್ಟಡವಾಗಿದ್ದು ಆಕಸ್ಮಿಕಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ನಜರಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…