ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ಬೆಳಗ್ಗಿನ ಜಾವ ಆರು ಗಂಟೆ ಸುಮಾರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಹಳೇ ಪ್ರಾಧಿಕಾರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂದಿ, ವಾಹನ ಚಾಲಕರು ಬೆಂಕಿಯನ್ನು ಕಂಡು ತಮ್ಮ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಬೆಂಕಿ ದುರಂತದಲ್ಲಿ ಪೀಠೋಪಕರಣಗಳು,ಸೈಬರ್ ಟಿ.ವಿ., ಮಕ್ಕಳ ಡ್ರಾಯಿಂಗ್ ಪರಿಕರಗಳು ನಾಶವಾಗಿವೆ. ಅಗ್ನಿಶಾಮಕ ಠಾಣೆಗೆ ಕರೆ ಬಂದ ಮೇರೆಗೆ ಸುಮಾರು ಐದಾರು ಅಗ್ನಿಶಾಮಕ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ಸಂಬಂಧ ಆಂದೋಲನ ಡಿಜಿಟಲ್ ತಂಡಕ್ಕೆ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಅವರು, ಕಚೇರಿಯ ಟೇಬಲ್,ಕುರ್ಚಿ,ಸೈಬರ್ ಟಿ.ವಿ.,ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಮೇಜು,ಕುರ್ಚಿ ಇತ್ಯಾದಿ ಪೀಠೋಪಕರಣಗಳು, ಮಕ್ಕಳ ಡ್ರಾಯಿಂಗ್ ಇತ್ಯಾದಿ ಪರಿಕರಗಳು ಸುಟ್ಟು ನಾಶವಾಗಿವೆ. ಎ ಮತ್ತು ಸಿ ಬ್ಲಾಕ್ ನಲ್ಲಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಬೆಂಕಿ ಹರಡಿಲ್ಲ. ಹಳೆಯ ಕಟ್ಟಡವಾಗಿದ್ದು ಆಕಸ್ಮಿಕಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ನಜರಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…