ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ಬೆಳಗ್ಗಿನ ಜಾವ ಆರು ಗಂಟೆ ಸುಮಾರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಹಳೇ ಪ್ರಾಧಿಕಾರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂದಿ, ವಾಹನ ಚಾಲಕರು ಬೆಂಕಿಯನ್ನು ಕಂಡು ತಮ್ಮ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಬೆಂಕಿ ದುರಂತದಲ್ಲಿ ಪೀಠೋಪಕರಣಗಳು,ಸೈಬರ್ ಟಿ.ವಿ., ಮಕ್ಕಳ ಡ್ರಾಯಿಂಗ್ ಪರಿಕರಗಳು ನಾಶವಾಗಿವೆ. ಅಗ್ನಿಶಾಮಕ ಠಾಣೆಗೆ ಕರೆ ಬಂದ ಮೇರೆಗೆ ಸುಮಾರು ಐದಾರು ಅಗ್ನಿಶಾಮಕ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ಸಂಬಂಧ ಆಂದೋಲನ ಡಿಜಿಟಲ್ ತಂಡಕ್ಕೆ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಅವರು, ಕಚೇರಿಯ ಟೇಬಲ್,ಕುರ್ಚಿ,ಸೈಬರ್ ಟಿ.ವಿ.,ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಮೇಜು,ಕುರ್ಚಿ ಇತ್ಯಾದಿ ಪೀಠೋಪಕರಣಗಳು, ಮಕ್ಕಳ ಡ್ರಾಯಿಂಗ್ ಇತ್ಯಾದಿ ಪರಿಕರಗಳು ಸುಟ್ಟು ನಾಶವಾಗಿವೆ. ಎ ಮತ್ತು ಸಿ ಬ್ಲಾಕ್ ನಲ್ಲಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಬೆಂಕಿ ಹರಡಿಲ್ಲ. ಹಳೆಯ ಕಟ್ಟಡವಾಗಿದ್ದು ಆಕಸ್ಮಿಕಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ನಜರಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…