ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ಬೆಳಗ್ಗಿನ ಜಾವ ಆರು ಗಂಟೆ ಸುಮಾರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಹಳೇ ಪ್ರಾಧಿಕಾರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂದಿ, ವಾಹನ ಚಾಲಕರು ಬೆಂಕಿಯನ್ನು ಕಂಡು ತಮ್ಮ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಬೆಂಕಿ ದುರಂತದಲ್ಲಿ ಪೀಠೋಪಕರಣಗಳು,ಸೈಬರ್ ಟಿ.ವಿ., ಮಕ್ಕಳ ಡ್ರಾಯಿಂಗ್ ಪರಿಕರಗಳು ನಾಶವಾಗಿವೆ. ಅಗ್ನಿಶಾಮಕ ಠಾಣೆಗೆ ಕರೆ ಬಂದ ಮೇರೆಗೆ ಸುಮಾರು ಐದಾರು ಅಗ್ನಿಶಾಮಕ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ಸಂಬಂಧ ಆಂದೋಲನ ಡಿಜಿಟಲ್ ತಂಡಕ್ಕೆ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಅವರು, ಕಚೇರಿಯ ಟೇಬಲ್,ಕುರ್ಚಿ,ಸೈಬರ್ ಟಿ.ವಿ.,ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಮೇಜು,ಕುರ್ಚಿ ಇತ್ಯಾದಿ ಪೀಠೋಪಕರಣಗಳು, ಮಕ್ಕಳ ಡ್ರಾಯಿಂಗ್ ಇತ್ಯಾದಿ ಪರಿಕರಗಳು ಸುಟ್ಟು ನಾಶವಾಗಿವೆ. ಎ ಮತ್ತು ಸಿ ಬ್ಲಾಕ್ ನಲ್ಲಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಬೆಂಕಿ ಹರಡಿಲ್ಲ. ಹಳೆಯ ಕಟ್ಟಡವಾಗಿದ್ದು ಆಕಸ್ಮಿಕಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ನಜರಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…