BREAKING NEWS

ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು: ಹೈಕೋರ್ಟ್‌

ಬೆಂಗಳೂರು : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ.

ಪತಿ-ಪತ್ನಿ ದೂರವಾಗಲು ಪ್ರಜ್ಞಾಪೂರ್ವಕ ನಿರ್ಧಾರದ ಹೊರತಾಗಿಯೂ ದಂಪತಿಗಳು ಅನಗತ್ಯವಾಗಿ ಕಾಯುವಂತೆ ಮಾಡುವುದು ಅವರ ಸಂಕಟವನ್ನು ಹೆಚ್ಚಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮನವಿಯನ್ನು ಸಲ್ಲಿಸಲು ಸಮಯವಾಕಾಶ ಮತ್ತು ಅರ್ಜಿಯನ್ನು ಸಲ್ಲಿಸುವ ದಿನಾಂಕದಿಂದ ಆರು ತಿಂಗಳ ಅವಧಿಯನ್ನು ಒದಗಿಸುವ ಉದ್ದೇಶವೆಂದರೆ, ಆರು ಅವಧಿಯ ನಂತರ ಇಬ್ಬರೂ ತಮ್ಮ ಮನಸ್ಸನ್ನು ಬದಲಾಯಿಸಬಹುದು ಮತ್ತು ಅವರ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂಬುದಾಗಿದೆ. ಆದರೆ ತಿಂಗಳುಗಳು ಕಳೆದ ಮೇಲೂ ಕಕ್ಷಿದಾರರು ವಿಚ್ಛೇದನದೊಂದಿಗೆ ಮುಂದುವರಿಯಲು ನಿರ್ಧರಿಸುತ್ತಾರೆ. ಹೀಗಾಗಿ ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ಹೇಳಿದೆ.

ಮದ್ವೆಯಾಗಿ ಮೂರೇ ತಿಂಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ 

ವಿಶೇಷ ವಿವಾಹ ಕಾಯ್ದೆಯಡಿ ನವೆಂಬರ್‌ 2022ರಲ್ಲಿ ಮದುವೆಯಾಗಿದ್ದ ಜೋಡಿ ಮೂರೇ ತಿಂಗಳಲ್ಲಿ ದಾಂಪತ್ಯದಲ್ಲಿ ಸಮಸ್ಯೆ ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮದುವೆಯಾದ ಒಂದೇ ವರ್ಷಕ್ಕೆ ‘ಕೂಲಿಂಗ್ ಆಫ್‌’ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾರಣ ನೀಡಿ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಜೋಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಮಾತ್ರವಲ್ಲ, ‘ಇಬ್ಬರೂ ಪದವೀಧರರಾಗಿದ್ದು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೆ ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವೃತ್ತಿಯ ಕಡೆಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ವಿವಾಹವಾದ ಒಂದು ವರ್ಷದಲ್ಲಿ ಹೊಂದಾಣಿಕೆಯಾಗಬಹುದು ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಬಂಧವಿದೆ. ಇದು ಎಲ್ಲಾ ಪ್ರಕರಣಗಳಿಗೂ ಅನ್ವಯಿಸಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಹಾಗೆಯೇ ವಿಚ್ಛೇದನ ಅರ್ಜಿಯನ್ನು ಮರುಪರಿಶೀಲಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.

andolanait

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

4 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

4 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

4 hours ago