ಬೆಂಗಳೂರು : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ.
ಪತಿ-ಪತ್ನಿ ದೂರವಾಗಲು ಪ್ರಜ್ಞಾಪೂರ್ವಕ ನಿರ್ಧಾರದ ಹೊರತಾಗಿಯೂ ದಂಪತಿಗಳು ಅನಗತ್ಯವಾಗಿ ಕಾಯುವಂತೆ ಮಾಡುವುದು ಅವರ ಸಂಕಟವನ್ನು ಹೆಚ್ಚಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮನವಿಯನ್ನು ಸಲ್ಲಿಸಲು ಸಮಯವಾಕಾಶ ಮತ್ತು ಅರ್ಜಿಯನ್ನು ಸಲ್ಲಿಸುವ ದಿನಾಂಕದಿಂದ ಆರು ತಿಂಗಳ ಅವಧಿಯನ್ನು ಒದಗಿಸುವ ಉದ್ದೇಶವೆಂದರೆ, ಆರು ಅವಧಿಯ ನಂತರ ಇಬ್ಬರೂ ತಮ್ಮ ಮನಸ್ಸನ್ನು ಬದಲಾಯಿಸಬಹುದು ಮತ್ತು ಅವರ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂಬುದಾಗಿದೆ. ಆದರೆ ತಿಂಗಳುಗಳು ಕಳೆದ ಮೇಲೂ ಕಕ್ಷಿದಾರರು ವಿಚ್ಛೇದನದೊಂದಿಗೆ ಮುಂದುವರಿಯಲು ನಿರ್ಧರಿಸುತ್ತಾರೆ. ಹೀಗಾಗಿ ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ಹೇಳಿದೆ.
ಮದ್ವೆಯಾಗಿ ಮೂರೇ ತಿಂಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ
ವಿಶೇಷ ವಿವಾಹ ಕಾಯ್ದೆಯಡಿ ನವೆಂಬರ್ 2022ರಲ್ಲಿ ಮದುವೆಯಾಗಿದ್ದ ಜೋಡಿ ಮೂರೇ ತಿಂಗಳಲ್ಲಿ ದಾಂಪತ್ಯದಲ್ಲಿ ಸಮಸ್ಯೆ ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮದುವೆಯಾದ ಒಂದೇ ವರ್ಷಕ್ಕೆ ‘ಕೂಲಿಂಗ್ ಆಫ್’ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾರಣ ನೀಡಿ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಜೋಡಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಮಾತ್ರವಲ್ಲ, ‘ಇಬ್ಬರೂ ಪದವೀಧರರಾಗಿದ್ದು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೆ ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವೃತ್ತಿಯ ಕಡೆಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ವಿವಾಹವಾದ ಒಂದು ವರ್ಷದಲ್ಲಿ ಹೊಂದಾಣಿಕೆಯಾಗಬಹುದು ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಬಂಧವಿದೆ. ಇದು ಎಲ್ಲಾ ಪ್ರಕರಣಗಳಿಗೂ ಅನ್ವಯಿಸಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಹಾಗೆಯೇ ವಿಚ್ಛೇದನ ಅರ್ಜಿಯನ್ನು ಮರುಪರಿಶೀಲಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…