BREAKING NEWS

ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು: ಹೈಕೋರ್ಟ್‌

ಬೆಂಗಳೂರು : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ.

ಪತಿ-ಪತ್ನಿ ದೂರವಾಗಲು ಪ್ರಜ್ಞಾಪೂರ್ವಕ ನಿರ್ಧಾರದ ಹೊರತಾಗಿಯೂ ದಂಪತಿಗಳು ಅನಗತ್ಯವಾಗಿ ಕಾಯುವಂತೆ ಮಾಡುವುದು ಅವರ ಸಂಕಟವನ್ನು ಹೆಚ್ಚಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮನವಿಯನ್ನು ಸಲ್ಲಿಸಲು ಸಮಯವಾಕಾಶ ಮತ್ತು ಅರ್ಜಿಯನ್ನು ಸಲ್ಲಿಸುವ ದಿನಾಂಕದಿಂದ ಆರು ತಿಂಗಳ ಅವಧಿಯನ್ನು ಒದಗಿಸುವ ಉದ್ದೇಶವೆಂದರೆ, ಆರು ಅವಧಿಯ ನಂತರ ಇಬ್ಬರೂ ತಮ್ಮ ಮನಸ್ಸನ್ನು ಬದಲಾಯಿಸಬಹುದು ಮತ್ತು ಅವರ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂಬುದಾಗಿದೆ. ಆದರೆ ತಿಂಗಳುಗಳು ಕಳೆದ ಮೇಲೂ ಕಕ್ಷಿದಾರರು ವಿಚ್ಛೇದನದೊಂದಿಗೆ ಮುಂದುವರಿಯಲು ನಿರ್ಧರಿಸುತ್ತಾರೆ. ಹೀಗಾಗಿ ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ಹೇಳಿದೆ.

ಮದ್ವೆಯಾಗಿ ಮೂರೇ ತಿಂಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ 

ವಿಶೇಷ ವಿವಾಹ ಕಾಯ್ದೆಯಡಿ ನವೆಂಬರ್‌ 2022ರಲ್ಲಿ ಮದುವೆಯಾಗಿದ್ದ ಜೋಡಿ ಮೂರೇ ತಿಂಗಳಲ್ಲಿ ದಾಂಪತ್ಯದಲ್ಲಿ ಸಮಸ್ಯೆ ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮದುವೆಯಾದ ಒಂದೇ ವರ್ಷಕ್ಕೆ ‘ಕೂಲಿಂಗ್ ಆಫ್‌’ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾರಣ ನೀಡಿ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಜೋಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಮಾತ್ರವಲ್ಲ, ‘ಇಬ್ಬರೂ ಪದವೀಧರರಾಗಿದ್ದು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೆ ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವೃತ್ತಿಯ ಕಡೆಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ವಿವಾಹವಾದ ಒಂದು ವರ್ಷದಲ್ಲಿ ಹೊಂದಾಣಿಕೆಯಾಗಬಹುದು ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಬಂಧವಿದೆ. ಇದು ಎಲ್ಲಾ ಪ್ರಕರಣಗಳಿಗೂ ಅನ್ವಯಿಸಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಹಾಗೆಯೇ ವಿಚ್ಛೇದನ ಅರ್ಜಿಯನ್ನು ಮರುಪರಿಶೀಲಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

16 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

17 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

18 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago