BREAKING NEWS

ಡಿಕೆಶಿ ಪ್ರಕರಣ : ತೀರ್ಪು ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು : ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಕುರಿತಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪೂರ್ಣಗೊಳಿಸಿತು.

ಬಾಕಿ ಉಳಿದಿದ್ದ ತಮ್ಮ ವಾದ ಮುಂದುವರಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಇಂತಹುದೇ ತನಿಖಾ ಸಂಸ್ಥೆಯು ತನಿಖೆ ನಡೆಸಬೇಕು ಎಂದು ಹೇಳುವುದಾಗಲೀ ಅಥವಾ ಇಂತಹುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸುವ ಹಕ್ಕನ್ನಾಗಲೀ ಆರೋಪಿ ಹೊಂದಿಲ್ಲ. ವಿಶೇಷ ಅಧಿನಿಯಮವಾದ, ದೆಹಲಿ ಪೊಲೀಸ್‌ ಸ್ಥಾಪನಾ ಕಾಯ್ದೆ–1947ರ ಕಲಂ 6ರ ಅಡಿಯಲ್ಲಿ ತನಿಖೆಗೆ ನೀಡಲಾದ ಒಪ್ಪಿಗೆಯ ಕಾರಣಗಳನ್ನು ಸಿಬಿಐ ವಿವರಿಸುವ ಅಗತ್ಯವೇ ಇಲ್ಲ’ ಎಂದರು.

‘ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಇಂತಹದೇ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ 2020ರಲ್ಲೇ ವಜಾಗೊಳಿಸಿದೆ. ಈ ಅರ್ಜಿಯನ್ನು 2020ರಲ್ಲೇ ಸಲ್ಲಿಸಿದ್ದರೂ ಇದಕ್ಕೆ ತಡೆ ಸಿಕ್ಕಿಲ್ಲ. ಆದಕಾರಣ ಕಾನೂನು ರೀತ್ಯಾ ಶಿವಕುಮಾರ್‌ ಅವರ ಈ ಅರ್ಜಿ ಊರ್ಜಿತವಾಗುವುದಿಲ್ಲ’ ಎಂದು ವಿವರಿಸಿದರು.

‘ಎರಡೂವರೆ ವರ್ಷಗಳಲ್ಲಿ ಸಿಬಿಐ ಈಗಾಗಲೇ ಶೇ 90ರಷ್ಟು ತನಿಖೆ ಪೂರ್ಣಗೊಳಿಸಿದೆ. ಈ ಕುರಿತಂತೆ ತನಿಖೆಯ ವಸ್ತುಸ್ಥಿತಿ ವರದಿಯನ್ನು ಕೋರ್ಟಿಗೂ ಸಲ್ಲಿಸಲಾಗಿದೆ. ಇಷ್ಟೆಲ್ಲಾ ಸಮಯ ಕಳೆದ ಮೇಲೆ ಅರ್ಜಿದಾರರು ಅಧಿಸೂಚನೆ ಪ್ರಶ್ನಿಸುವುದಾ

ಗಲೀ ಅಥವಾ ರದ್ದುಗೊಳಿಸಿ ಎಂದು ಕೋರುವುದಾಗಲಿ ಕಾನೂನು ಪ್ರಕಾರ ಸಾಧ್ಯವಿಲ್ಲ. ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿಸಿರುವ ವಿಶೇಷ ಕ್ರಿಮಿನಲ್‌ ಪ್ರಕರಣ. ಹೀಗಾಗಿ, ಡಿ.ಕೆ. ಶಿವಕುಮಾರ್ ಸಿಬಿಐ ಮುಂದೆ ಹಾಜರಾಗಿ ಕೋಟ್ಯಂತರ ರೂಪಾಯಿಗಳನ್ನು ಎಲ್ಲಿಂದ, ಹೇಗೆ ಸಂಪಾದಿಸಿದರು ಎಂಬುದನ್ನು ವಿವರಿಸಲೇಬೇಕಿದೆ’ ಎಂದು ಪ್ರತಿಪಾದಿಸಿದರು.

ಇದನ್ನು ಬಲವಾಗಿ ಅಲ್ಲಗಳೆದ ಶಿವಕುಮಾರ್ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ‘ಈ ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಶಿವಕುಮಾರ್ ಗೆದ್ದಿದ್ದಾರೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮವನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು. ಇದೇ ವೇಳೆ ಸಿಬಿಐ ತನಿಖೆಗೆ ಹೈಕೋರ್ಟ್‌ 2023ರ ಫೆಬ್ರುವರಿ 10ರಂದು ನೀಡಿರುವ ಮಧ್ಯಂತರ ತಡೆಯನ್ನು ವಿಸ್ತರಿಸಿತು.

ಪ್ರಕರಣವೇನು?: ‘ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದ್ದು; ಸಿಬಿಐ ತನಿಖೆಗೆ ಒಪ್ಪಿಸಲಾದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಶಿವಕುಮಾರ್ ಈ ಅರ್ಜಿ ಸಲ್ಲಿಸಿದ್ದಾರೆ

lokesh

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

56 mins ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

59 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

2 hours ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago