ನವದೆಹಲಿ : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ರದ್ದುಗೋಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ಮತ್ತೆ ಹೈ ಕೋರ್ಟ್ ಗೆ ವರ್ಗಾವಣೆ ಮಾಡಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್ ನಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದೆ.
ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ವಕೀಲರು,ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ,ಆದರೆ ವಿಭಾಗಿಯ ಪೀಠ ತಡೆ ನೀಡಿತ್ತು.ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡರು.
ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಹೈಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರುಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡಿದರು.ಈ ಮೂಲಕ ಪ್ರಕರಣ ಮತ್ತೊಮ್ಮೆ ಹೈ ಕೋರ್ಟ್ ಅಂಗಳ ತಲುಪಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…