ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ಇನ್ನು ಬಿಜೆಪಿಗೆ ಮರಳಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಎಂಎಸ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮಾಡಿದ್ದೇನೆ ಎಂದಿದ್ದಾರೆ.
ಅತ್ತ ಕಾಂಗ್ರೆಸ್ನ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಶೆಟ್ಟರ್ ಅವರ ಈ ಅನಿರೀಕ್ಷಿತ ನಡೆ ಕುರಿತು ಇದೀಗ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಡಿಕೆ ಶಿವಕುಮಾರ್ ” ಕಾಂಗ್ರೆಸ್ ಅಧ್ಯಕ್ಷನಾಗಿ ನನಗೆ ರಾಜೀನಾಮೆ ಪತ್ರ ತಲುಪಿಲ್ಲ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಪಕ್ಷಕ್ಕೆ ವಾಪಸ್ ಕರೆದುಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ನನ್ನ ಬಳಿ ಹೇಳಿದ್ದರು. ನಾನು ನಿನ್ನೆ ಬೆಳಗ್ಗೆ ಕೂಡ ಅವರ ಬಳಿ ಮಾತನಾಡಿದ್ದೆ. ನಾನು ಅಂತ ಕೆಲಸ ಮಾಡವುದಿಲ್ಲ, ನಾನು ಹೋಗುವುದಿಲ್ಲ. ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ನನಗೆ ಮರುಜೀವ ಕೊಟ್ಟಿದೆ. ನಾನು ಅಂತಹ ಕೆಲಸ ಮಾಡುವುದಿಲ್ಲ ಎಂದು ನನಗೆ ಹೇಳಿದ್ದರು. ಅದನ್ನೇ ನಾನು ಗಮನದಲ್ಲಿಟ್ಟುಕೊಂಡು ಮೈಸೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದೆ. ನಂತರ ರಾತ್ರಿಯೆಲ್ಲಾ ಬಿಜೆಪಿ ಕಚೇರಿಯಲ್ಲಿದ್ದಾರೆ, ಮಾತುಕತೆ ನಡೆದಿದೆ ಎಂಬ ಮಾಹಿತಿ ಬಂತು” ಎಂದು ಹೇಳಿಕೆ ನೀಡಿದರು.
ಇನ್ನೂ ಮುಂದುವರಿದು ಮಾತನಾಡಿದ ಡಿಕೆ ಶಿವಕುಮಾರ್ “ನಮ್ಮ ಕಾಂಗ್ರೆಸ್ ಪಕ್ಷ ಒಬ್ಬ ಹಿರಿಯ ನಾಯಕ ಅಂತ ಹೇಳಿ ಗೌರವದಿಂದ ನಡೆದುಕೊಂಡಿದ್ದೆವು. ಅವರೇ ಹೇಳಿದ್ರು ನಮಗೆ.. ಆ ಪಕ್ಷ ಒಳ್ಳೆದಲ್ಲ, ಮೊನ್ನೆ ತಾನೆ ಅವರೂ ಕೂಡ ಕೆಲವು ಹೇಳಿಕೆಗಳನ್ನು ಕೊಟ್ಟಿದ್ದಾರೆ. ರಾಮಮಂದಿರ ವಿಚಾರದಲ್ಲಿ ಬಿಜೆಪಿ ಯಾವ ರೀತಿ ದುರುಪಯೋಗ ಮಾಡ್ತಾ ಇದೆ ಎಂದು ಹೇಳಿದ್ದಾರೆ. ಅಂತಹ ಹಿರಿಯ ನಾಯಕನ ಬಗ್ಗೆ ನಾವು ವಿಶ್ವಾಸವನ್ನು ವ್ಯಕ್ತಪಡಿಸಿದ್ವಿ. ಈಗ ವಿಶ್ವಾಸಕ್ಕೆ ಧಕ್ಕೆ ಆಗ್ತಾ ಇದೆ. ಸ್ಪೀಕರ್ಗೆ, ಅಧ್ಯಕ್ಷರಿಗೆ ಫ್ಯಾಕ್ಸ್ನಲ್ಲಿ ರಾಜೀನಾಮೆ ಕಳುಹಿಸುತ್ತೇನೆ ಎಂದಿದ್ದಾರೆ. ಅವರದ್ದೇನು ತೀರ್ಮಾನ ಇದೆಯೊ, ಒತ್ತಡ ಇದೆಯೊ, ಒತ್ತಡ ಮಾಡಿ ಕರೆದುಕೊಂಡು ಹೋಗಿದ್ದಾರೋ, ಅವರು ಏನು ಹೇಳಿಕೆ ಕೊಡ್ತಾರೋ ಕೊಡಲಿ. ಆಮೇಲೆ ಅದರ ಬಗ್ಗೆ ನಾವು ನಿರ್ಧರಿಸುತ್ತೇವೆ” ಎಂದು ಹೇಳಿದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…