ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ಇನ್ನು ಬಿಜೆಪಿಗೆ ಮರಳಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಎಂಎಸ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮಾಡಿದ್ದೇನೆ ಎಂದಿದ್ದಾರೆ.
ಅತ್ತ ಕಾಂಗ್ರೆಸ್ನ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಶೆಟ್ಟರ್ ಅವರ ಈ ಅನಿರೀಕ್ಷಿತ ನಡೆ ಕುರಿತು ಇದೀಗ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಡಿಕೆ ಶಿವಕುಮಾರ್ ” ಕಾಂಗ್ರೆಸ್ ಅಧ್ಯಕ್ಷನಾಗಿ ನನಗೆ ರಾಜೀನಾಮೆ ಪತ್ರ ತಲುಪಿಲ್ಲ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಪಕ್ಷಕ್ಕೆ ವಾಪಸ್ ಕರೆದುಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ನನ್ನ ಬಳಿ ಹೇಳಿದ್ದರು. ನಾನು ನಿನ್ನೆ ಬೆಳಗ್ಗೆ ಕೂಡ ಅವರ ಬಳಿ ಮಾತನಾಡಿದ್ದೆ. ನಾನು ಅಂತ ಕೆಲಸ ಮಾಡವುದಿಲ್ಲ, ನಾನು ಹೋಗುವುದಿಲ್ಲ. ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ನನಗೆ ಮರುಜೀವ ಕೊಟ್ಟಿದೆ. ನಾನು ಅಂತಹ ಕೆಲಸ ಮಾಡುವುದಿಲ್ಲ ಎಂದು ನನಗೆ ಹೇಳಿದ್ದರು. ಅದನ್ನೇ ನಾನು ಗಮನದಲ್ಲಿಟ್ಟುಕೊಂಡು ಮೈಸೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದೆ. ನಂತರ ರಾತ್ರಿಯೆಲ್ಲಾ ಬಿಜೆಪಿ ಕಚೇರಿಯಲ್ಲಿದ್ದಾರೆ, ಮಾತುಕತೆ ನಡೆದಿದೆ ಎಂಬ ಮಾಹಿತಿ ಬಂತು” ಎಂದು ಹೇಳಿಕೆ ನೀಡಿದರು.
ಇನ್ನೂ ಮುಂದುವರಿದು ಮಾತನಾಡಿದ ಡಿಕೆ ಶಿವಕುಮಾರ್ “ನಮ್ಮ ಕಾಂಗ್ರೆಸ್ ಪಕ್ಷ ಒಬ್ಬ ಹಿರಿಯ ನಾಯಕ ಅಂತ ಹೇಳಿ ಗೌರವದಿಂದ ನಡೆದುಕೊಂಡಿದ್ದೆವು. ಅವರೇ ಹೇಳಿದ್ರು ನಮಗೆ.. ಆ ಪಕ್ಷ ಒಳ್ಳೆದಲ್ಲ, ಮೊನ್ನೆ ತಾನೆ ಅವರೂ ಕೂಡ ಕೆಲವು ಹೇಳಿಕೆಗಳನ್ನು ಕೊಟ್ಟಿದ್ದಾರೆ. ರಾಮಮಂದಿರ ವಿಚಾರದಲ್ಲಿ ಬಿಜೆಪಿ ಯಾವ ರೀತಿ ದುರುಪಯೋಗ ಮಾಡ್ತಾ ಇದೆ ಎಂದು ಹೇಳಿದ್ದಾರೆ. ಅಂತಹ ಹಿರಿಯ ನಾಯಕನ ಬಗ್ಗೆ ನಾವು ವಿಶ್ವಾಸವನ್ನು ವ್ಯಕ್ತಪಡಿಸಿದ್ವಿ. ಈಗ ವಿಶ್ವಾಸಕ್ಕೆ ಧಕ್ಕೆ ಆಗ್ತಾ ಇದೆ. ಸ್ಪೀಕರ್ಗೆ, ಅಧ್ಯಕ್ಷರಿಗೆ ಫ್ಯಾಕ್ಸ್ನಲ್ಲಿ ರಾಜೀನಾಮೆ ಕಳುಹಿಸುತ್ತೇನೆ ಎಂದಿದ್ದಾರೆ. ಅವರದ್ದೇನು ತೀರ್ಮಾನ ಇದೆಯೊ, ಒತ್ತಡ ಇದೆಯೊ, ಒತ್ತಡ ಮಾಡಿ ಕರೆದುಕೊಂಡು ಹೋಗಿದ್ದಾರೋ, ಅವರು ಏನು ಹೇಳಿಕೆ ಕೊಡ್ತಾರೋ ಕೊಡಲಿ. ಆಮೇಲೆ ಅದರ ಬಗ್ಗೆ ನಾವು ನಿರ್ಧರಿಸುತ್ತೇವೆ” ಎಂದು ಹೇಳಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…