ಬೆಂಗಳೂರು : ಎಡಿಆರ್ ಮತ್ತು ಎನ್ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ ದೇಶದ ಶಾಸಕರ ಆಸ್ತಿ-ಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿ.ಕೆ.ಶಿವಕುಮಾರ್ ಅವರು ಭಾರತದ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ.
ಕುತೂಹಲವೆಂದರೆ ಶ್ರೀಮಂತ ಶಾಸಕರು ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕೋಟಿ ಗೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಬಿಲಿಯನೇರ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರು 32 ಮಂದಿ ಇದ್ದಾರೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಬಿಲಿಯನೇರ್ ಶಾಸಕರು ಇಲ್ಲ. ದೇಶದ ಮೊದಲ ಮೂರು ಶ್ರೀಮಂತ ಶಾಸಕರೆಲ್ಲರೂ ಕರ್ನಾಟಕದವರೇ. ಹಾಗೆಯೇ, ಅಗ್ರ 20 ಸಿರಿವಂತ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರೇ 12 ಮಂದಿ ಇದ್ದಾರೆ.
ಇದೊಂದು ಅಪೂರ್ವ ಮತ್ತು ಮುಜುಗರದ ದಾಖಲೆ ಎನಿಸಿದೆ. ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್ನಲ್ಲಿ ಘೋಷಿಸಲಾಗಿರುವ ಅಂಶಗಳನ್ನು ಆಧರಿಸಿ ಎಡಿಆರ್ ಮತ್ತು ಎನ್ಇಡಬ್ಲ್ಯೂ ಈ ಪಟ್ಟಿ ಪ್ರಕಟಿಸಿದೆ.
ಸಾವಿರ ಕೋಟಿ ರೂಗೂ ಹೆಚ್ಚು ಆಸ್ತಿ ಇರುವ ಮೂವರು ಕನ್ನಡಿಗ ಶಾಸಕರು: ದೇಶದ ಅತಿಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಕರ್ನಾಟಕದವರದ್ದೇ. ಡಿಕೆ ಶಿವಕುಮಾರ್, ಕೆಎಚ್ ಪುಟ್ಟಸ್ವಾಮಿ ಗೌಡ ಮತ್ತು ಪ್ರಿಯಾಕೃಷ್ಣ ಅವರು ಮೊದಲ ಮೂರು ಸ್ಥಾನದಲ್ಲಿದ್ದಾರೆ.
ಈ ಬಾರಿ ಅಚ್ಚರಿ ಮೂಡಿಸಿದ್ದು ಪುಟ್ಟಸ್ವಾಮಿಗೌಡರದ್ದು. ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಪುಟ್ಟಸ್ವಾಮಿಗೌಡ ಅವರು ತಮ್ಮ ಬಳಿ 1,267 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ 1,413 ಕೋಟಿ ರೂ ಘೋಷಿತ ಆದಾಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ಅವರ ಘೋಷಿತ ಆಸ್ತಿ 1,156 ಕೋಟಿ ರೂ ಇದೆ.
ದೇಶದ ಟಾಪ್20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು ಮತ್ತವರ ಘೋಷಿತ ಆಸ್ತಿಮೌಲ್ಯ:
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…