BREAKING NEWS

ಡಿಕೆ ಶಿವಕುಮಾರ್ ಭಾರತದ ಅತಿ ಶ್ರೀಮಂತ ಶಾಸಕ: ಭಾರತದ ಬಿಲಿಯನೇರ್ ಶಾಸಕರಿವರು

ಬೆಂಗಳೂರು : ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ ದೇಶದ ಶಾಸಕರ ಆಸ್ತಿ-ಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭಾರತದ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ.

ಕುತೂಹಲವೆಂದರೆ ಶ್ರೀಮಂತ ಶಾಸಕರು ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕೋಟಿ ಗೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಬಿಲಿಯನೇರ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರು 32 ಮಂದಿ ಇದ್ದಾರೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಬಿಲಿಯನೇರ್ ಶಾಸಕರು ಇಲ್ಲ. ದೇಶದ ಮೊದಲ ಮೂರು ಶ್ರೀಮಂತ ಶಾಸಕರೆಲ್ಲರೂ ಕರ್ನಾಟಕದವರೇ. ಹಾಗೆಯೇ, ಅಗ್ರ 20 ಸಿರಿವಂತ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರೇ 12 ಮಂದಿ ಇದ್ದಾರೆ.

ಇದೊಂದು ಅಪೂರ್ವ ಮತ್ತು ಮುಜುಗರದ ದಾಖಲೆ ಎನಿಸಿದೆ. ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್​ನಲ್ಲಿ ಘೋಷಿಸಲಾಗಿರುವ ಅಂಶಗಳನ್ನು ಆಧರಿಸಿ ಎಡಿಆರ್ ಮತ್ತು ಎನ್​ಇಡಬ್ಲ್ಯೂ ಈ ಪಟ್ಟಿ ಪ್ರಕಟಿಸಿದೆ.

ಸಾವಿರ ಕೋಟಿ ರೂಗೂ ಹೆಚ್ಚು ಆಸ್ತಿ ಇರುವ ಮೂವರು ಕನ್ನಡಿಗ ಶಾಸಕರು: ದೇಶದ ಅತಿಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಕರ್ನಾಟಕದವರದ್ದೇ. ಡಿಕೆ ಶಿವಕುಮಾರ್, ಕೆಎಚ್ ಪುಟ್ಟಸ್ವಾಮಿ ಗೌಡ ಮತ್ತು ಪ್ರಿಯಾಕೃಷ್ಣ ಅವರು ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಈ ಬಾರಿ ಅಚ್ಚರಿ ಮೂಡಿಸಿದ್ದು ಪುಟ್ಟಸ್ವಾಮಿಗೌಡರದ್ದು. ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಪುಟ್ಟಸ್ವಾಮಿಗೌಡ ಅವರು ತಮ್ಮ ಬಳಿ 1,267 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ 1,413 ಕೋಟಿ ರೂ ಘೋಷಿತ ಆದಾಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ಅವರ ಘೋಷಿತ ಆಸ್ತಿ 1,156 ಕೋಟಿ ರೂ ಇದೆ.

ದೇಶದ ಟಾಪ್20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು ಮತ್ತವರ ಘೋಷಿತ ಆಸ್ತಿಮೌಲ್ಯ:

  • ಡಿಕೆ ಶಿವಕುಮಾರ್, ಕಾಂಗ್ರೆಸ್: 1,413ಕೋಟಿ ರೂ
  • ಕೆಎಚ್ ಪುಟ್ಟಸ್ವಾಮಿಗೌಡ, ಪಕ್ಷೇತರ: 1,267 ಕೋಟಿ ರೂ
  • ಪ್ರಿಯಾಕೃಷ್ಣ, ಕಾಂಗ್ರೆಸ್: 1,156 ಕೋಟಿ ರೂ
  • ಬಿಎಸ್ ಸುರೇಶ, ಕಾಂಗ್ರೆಸ್: 648 ಕೋಟಿ ರೂ
  • ಎನ್.ಎ. ಹ್ಯಾರಿಸ್, ಕಾಂಗ್ರೆಸ್: 439 ಕೋಟಿ ರೂ
  • ಎಚ್.ಕೆ. ಸುರೇಶ್, ಬಿಜೆಪಿ: 435 ಕೋಟಿ ರೂ
  • ಆರ್.ವಿ. ದೇಶಪಾಂಡೆ, ಕಾಂಗ್ರೆಸ್: 363 ಕೋಟಿ ರೂ
  • ಎಂಆರ್ ಮಂಜುನಾಥ್, ಜೆಡಿಎಸ್: 316 ಕೋಟಿ ರೂ
  • ಎಸ್.ಎನ್. ಸುಬ್ಬಾರೆಡ್ಡಿ, ಕಾಂಗ್ರೆಸ್: 313 ಕೋಟಿ ರೂ
  • ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್: 312 ಕೋಟಿ ರೂ
  • ಎಂ ಕೃಷ್ಣಪ್ಪ, ಕಾಂಗ್ರೆಸ್: 296 ಕೋಟಿ ರೂ
  • ಮುನಿರತ್ನ, ಬಿಜೆಪಿ: 293 ಕೋಟಿ ರೂ
andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago