BREAKING NEWS

ಡಿಕೆ ಶಿವಕುಮಾರ್ ಭಾರತದ ಅತಿ ಶ್ರೀಮಂತ ಶಾಸಕ: ಭಾರತದ ಬಿಲಿಯನೇರ್ ಶಾಸಕರಿವರು

ಬೆಂಗಳೂರು : ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ ದೇಶದ ಶಾಸಕರ ಆಸ್ತಿ-ಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭಾರತದ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ.

ಕುತೂಹಲವೆಂದರೆ ಶ್ರೀಮಂತ ಶಾಸಕರು ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕೋಟಿ ಗೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಬಿಲಿಯನೇರ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರು 32 ಮಂದಿ ಇದ್ದಾರೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಬಿಲಿಯನೇರ್ ಶಾಸಕರು ಇಲ್ಲ. ದೇಶದ ಮೊದಲ ಮೂರು ಶ್ರೀಮಂತ ಶಾಸಕರೆಲ್ಲರೂ ಕರ್ನಾಟಕದವರೇ. ಹಾಗೆಯೇ, ಅಗ್ರ 20 ಸಿರಿವಂತ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರೇ 12 ಮಂದಿ ಇದ್ದಾರೆ.

ಇದೊಂದು ಅಪೂರ್ವ ಮತ್ತು ಮುಜುಗರದ ದಾಖಲೆ ಎನಿಸಿದೆ. ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್​ನಲ್ಲಿ ಘೋಷಿಸಲಾಗಿರುವ ಅಂಶಗಳನ್ನು ಆಧರಿಸಿ ಎಡಿಆರ್ ಮತ್ತು ಎನ್​ಇಡಬ್ಲ್ಯೂ ಈ ಪಟ್ಟಿ ಪ್ರಕಟಿಸಿದೆ.

ಸಾವಿರ ಕೋಟಿ ರೂಗೂ ಹೆಚ್ಚು ಆಸ್ತಿ ಇರುವ ಮೂವರು ಕನ್ನಡಿಗ ಶಾಸಕರು: ದೇಶದ ಅತಿಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಕರ್ನಾಟಕದವರದ್ದೇ. ಡಿಕೆ ಶಿವಕುಮಾರ್, ಕೆಎಚ್ ಪುಟ್ಟಸ್ವಾಮಿ ಗೌಡ ಮತ್ತು ಪ್ರಿಯಾಕೃಷ್ಣ ಅವರು ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಈ ಬಾರಿ ಅಚ್ಚರಿ ಮೂಡಿಸಿದ್ದು ಪುಟ್ಟಸ್ವಾಮಿಗೌಡರದ್ದು. ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಪುಟ್ಟಸ್ವಾಮಿಗೌಡ ಅವರು ತಮ್ಮ ಬಳಿ 1,267 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ 1,413 ಕೋಟಿ ರೂ ಘೋಷಿತ ಆದಾಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ಅವರ ಘೋಷಿತ ಆಸ್ತಿ 1,156 ಕೋಟಿ ರೂ ಇದೆ.

ದೇಶದ ಟಾಪ್20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು ಮತ್ತವರ ಘೋಷಿತ ಆಸ್ತಿಮೌಲ್ಯ:

  • ಡಿಕೆ ಶಿವಕುಮಾರ್, ಕಾಂಗ್ರೆಸ್: 1,413ಕೋಟಿ ರೂ
  • ಕೆಎಚ್ ಪುಟ್ಟಸ್ವಾಮಿಗೌಡ, ಪಕ್ಷೇತರ: 1,267 ಕೋಟಿ ರೂ
  • ಪ್ರಿಯಾಕೃಷ್ಣ, ಕಾಂಗ್ರೆಸ್: 1,156 ಕೋಟಿ ರೂ
  • ಬಿಎಸ್ ಸುರೇಶ, ಕಾಂಗ್ರೆಸ್: 648 ಕೋಟಿ ರೂ
  • ಎನ್.ಎ. ಹ್ಯಾರಿಸ್, ಕಾಂಗ್ರೆಸ್: 439 ಕೋಟಿ ರೂ
  • ಎಚ್.ಕೆ. ಸುರೇಶ್, ಬಿಜೆಪಿ: 435 ಕೋಟಿ ರೂ
  • ಆರ್.ವಿ. ದೇಶಪಾಂಡೆ, ಕಾಂಗ್ರೆಸ್: 363 ಕೋಟಿ ರೂ
  • ಎಂಆರ್ ಮಂಜುನಾಥ್, ಜೆಡಿಎಸ್: 316 ಕೋಟಿ ರೂ
  • ಎಸ್.ಎನ್. ಸುಬ್ಬಾರೆಡ್ಡಿ, ಕಾಂಗ್ರೆಸ್: 313 ಕೋಟಿ ರೂ
  • ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್: 312 ಕೋಟಿ ರೂ
  • ಎಂ ಕೃಷ್ಣಪ್ಪ, ಕಾಂಗ್ರೆಸ್: 296 ಕೋಟಿ ರೂ
  • ಮುನಿರತ್ನ, ಬಿಜೆಪಿ: 293 ಕೋಟಿ ರೂ
andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago