BREAKING NEWS

ಡಿಕೆ ಶಿವಕುಮಾರ್ ಭಾರತದ ಅತಿ ಶ್ರೀಮಂತ ಶಾಸಕ: ಭಾರತದ ಬಿಲಿಯನೇರ್ ಶಾಸಕರಿವರು

ಬೆಂಗಳೂರು : ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ ದೇಶದ ಶಾಸಕರ ಆಸ್ತಿ-ಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭಾರತದ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ.

ಕುತೂಹಲವೆಂದರೆ ಶ್ರೀಮಂತ ಶಾಸಕರು ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕೋಟಿ ಗೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಬಿಲಿಯನೇರ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರು 32 ಮಂದಿ ಇದ್ದಾರೆ. ದೇಶದ ಯಾವ ರಾಜ್ಯದಲ್ಲೂ ಇಷ್ಟೊಂದು ಬಿಲಿಯನೇರ್ ಶಾಸಕರು ಇಲ್ಲ. ದೇಶದ ಮೊದಲ ಮೂರು ಶ್ರೀಮಂತ ಶಾಸಕರೆಲ್ಲರೂ ಕರ್ನಾಟಕದವರೇ. ಹಾಗೆಯೇ, ಅಗ್ರ 20 ಸಿರಿವಂತ ಶಾಸಕರ ಪಟ್ಟಿಯಲ್ಲಿ ಕರ್ನಾಟಕದವರೇ 12 ಮಂದಿ ಇದ್ದಾರೆ.

ಇದೊಂದು ಅಪೂರ್ವ ಮತ್ತು ಮುಜುಗರದ ದಾಖಲೆ ಎನಿಸಿದೆ. ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್​ನಲ್ಲಿ ಘೋಷಿಸಲಾಗಿರುವ ಅಂಶಗಳನ್ನು ಆಧರಿಸಿ ಎಡಿಆರ್ ಮತ್ತು ಎನ್​ಇಡಬ್ಲ್ಯೂ ಈ ಪಟ್ಟಿ ಪ್ರಕಟಿಸಿದೆ.

ಸಾವಿರ ಕೋಟಿ ರೂಗೂ ಹೆಚ್ಚು ಆಸ್ತಿ ಇರುವ ಮೂವರು ಕನ್ನಡಿಗ ಶಾಸಕರು: ದೇಶದ ಅತಿಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಕರ್ನಾಟಕದವರದ್ದೇ. ಡಿಕೆ ಶಿವಕುಮಾರ್, ಕೆಎಚ್ ಪುಟ್ಟಸ್ವಾಮಿ ಗೌಡ ಮತ್ತು ಪ್ರಿಯಾಕೃಷ್ಣ ಅವರು ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಈ ಬಾರಿ ಅಚ್ಚರಿ ಮೂಡಿಸಿದ್ದು ಪುಟ್ಟಸ್ವಾಮಿಗೌಡರದ್ದು. ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಪುಟ್ಟಸ್ವಾಮಿಗೌಡ ಅವರು ತಮ್ಮ ಬಳಿ 1,267 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ 1,413 ಕೋಟಿ ರೂ ಘೋಷಿತ ಆದಾಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ಅವರ ಘೋಷಿತ ಆಸ್ತಿ 1,156 ಕೋಟಿ ರೂ ಇದೆ.

ದೇಶದ ಟಾಪ್20 ಶ್ರೀಮಂತ ಶಾಸಕರಲ್ಲಿ ಕರ್ನಾಟಕದವರು ಮತ್ತವರ ಘೋಷಿತ ಆಸ್ತಿಮೌಲ್ಯ:

  • ಡಿಕೆ ಶಿವಕುಮಾರ್, ಕಾಂಗ್ರೆಸ್: 1,413ಕೋಟಿ ರೂ
  • ಕೆಎಚ್ ಪುಟ್ಟಸ್ವಾಮಿಗೌಡ, ಪಕ್ಷೇತರ: 1,267 ಕೋಟಿ ರೂ
  • ಪ್ರಿಯಾಕೃಷ್ಣ, ಕಾಂಗ್ರೆಸ್: 1,156 ಕೋಟಿ ರೂ
  • ಬಿಎಸ್ ಸುರೇಶ, ಕಾಂಗ್ರೆಸ್: 648 ಕೋಟಿ ರೂ
  • ಎನ್.ಎ. ಹ್ಯಾರಿಸ್, ಕಾಂಗ್ರೆಸ್: 439 ಕೋಟಿ ರೂ
  • ಎಚ್.ಕೆ. ಸುರೇಶ್, ಬಿಜೆಪಿ: 435 ಕೋಟಿ ರೂ
  • ಆರ್.ವಿ. ದೇಶಪಾಂಡೆ, ಕಾಂಗ್ರೆಸ್: 363 ಕೋಟಿ ರೂ
  • ಎಂಆರ್ ಮಂಜುನಾಥ್, ಜೆಡಿಎಸ್: 316 ಕೋಟಿ ರೂ
  • ಎಸ್.ಎನ್. ಸುಬ್ಬಾರೆಡ್ಡಿ, ಕಾಂಗ್ರೆಸ್: 313 ಕೋಟಿ ರೂ
  • ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್: 312 ಕೋಟಿ ರೂ
  • ಎಂ ಕೃಷ್ಣಪ್ಪ, ಕಾಂಗ್ರೆಸ್: 296 ಕೋಟಿ ರೂ
  • ಮುನಿರತ್ನ, ಬಿಜೆಪಿ: 293 ಕೋಟಿ ರೂ
andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago