BREAKING NEWS

ಡಿ.ಕೆ ಶಿವಕುಮಾರ್ ಅಯೋಗ್ಯ ಡಿಸಿಎಂ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಮಾಧ್ಯಮದವರ ಜೊತೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಂದಿನಿಂದ ಇಂದಿನವರೆಗೆ ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆಗಳೇ ಕಾಂಗ್ರೆಸ್ ಪಕ್ಷದ ನೂರು ದಿನಗಳ ಸಾಧನೆಯಾಗಿದ್ದು ಬೇರೆ ಅಭಿವೃದ್ಧಿ ಕಾರ್ಯಗಳು ಯಾವುದೂ ನಡೆಯಲಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಅದರಾಚೆಗೆ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನ ಚೇಲಾಗಳು ಡಿಕೆಶಿಗೆ ಅವಮಾನ ಮಾಡಲೆಂದೇ ಮೂರು ಡಿಸಿಎಂಗಳ ಬೇಡಿಕೆ ಇಟ್ಡಿದ್ದಾರೆ, ಮೂರು ಡಿಸಿಎಂಗೆ ಹೋಗುತ್ತದೋ, ಐದು ಡಿಸಿಎಂ ಗೆ ಹೋಗುತ್ತದೋ ಗೊತ್ತಿಲ್ಲ, ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯವರೆಗೆ ಈ ಸರ್ಕಾರ ಇರುತ್ತದೋ ಇಲ್ಲವೋ ಗೊತ್ತಿಲ್ಲ, ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆ ನಡೆಯುತ್ತಿದೆ ನಮ್ಮ ಸರಕಾರ ಇದ್ದಾಗ 40% ಸರಕಾರ ಅಂತಿದ್ದರು ಆದರೆ ಯಾವುದೇ ಒಬ್ಬ ಒಂದೇ ಒಂದು ಸಾಕ್ಷಿ‌ ಕೊಡಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ನಂತರ ಭ್ರಷ್ಟಾಚಾರ ನಡೆಯುತ್ತಿದೆ, ಒಬ್ಬೊಬ್ಬ ಅಧಿಕಾರಿಯಿಂದಲೂ‌ ಲಂಚ ಪಡೆಯುತ್ತಿದ್ದಾರೆ ಇದನ್ನು ಅವರ ಪಕ್ಷದ ಶಾಸಕರೇ ಆರೋಪ ಮಾಡುತ್ತಿದ್ದಾರೆ. 40% ಕ್ಕಿಂತ ಹೆಚ್ಚಿನ ಲಂಚವನ್ನು ಸಿದ್ದರಾಮಯ್ಯ, ಅವರ ಮಗ ಯತೀಂದ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಬೇಕಾದರೆ ನಾನು‌ ಸಾಕ್ಷಿ ಒದಗಿಸುತ್ತೇನೆ, ನಿವೃತ್ತ ನ್ಯಾಯಾಧೀಶರು ಅಥವಾ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸವಾಲ್ ಹಾಕಿದರು.

ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಆಗುತ್ತಿಲ್ಲ, ಒಂದು ಬುಟ್ಟಿ ಮಣ್ಣು ರಸ್ತೆಗೆ ಬಿದ್ದಿಲ್ಲ, ಪ್ರತಿ ಕ್ಷೇತ್ರಕ್ಕೆ 2 ಕೋಟಿ ರೂ ಕೊಡ್ತೀವಿ ಅಂದಿದ್ರು 50 ಲಕ್ಷ ರೂ ಬಿಡುಗಡೆ ಮಾಡುವುದಾಗಿ ಆದೇಶ ಕೊಟ್ಟಿದ್ದಾರೆ. ಅಭಿವೃದ್ಧಿ ಕಾರ್ಯ ನಡೆಯದಿದ್ದರೆ ಹೋರಾಟ ಅನಿವಾರ್ಯ ಎಂದು ಹೇಳಿದರು.

lokesh

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

2 hours ago