BREAKING NEWS

ಡಿ.ಕೆ ಶಿವಕುಮಾರ್ ಅಯೋಗ್ಯ ಡಿಸಿಎಂ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಮಾಧ್ಯಮದವರ ಜೊತೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಂದಿನಿಂದ ಇಂದಿನವರೆಗೆ ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆಗಳೇ ಕಾಂಗ್ರೆಸ್ ಪಕ್ಷದ ನೂರು ದಿನಗಳ ಸಾಧನೆಯಾಗಿದ್ದು ಬೇರೆ ಅಭಿವೃದ್ಧಿ ಕಾರ್ಯಗಳು ಯಾವುದೂ ನಡೆಯಲಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಅದರಾಚೆಗೆ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನ ಚೇಲಾಗಳು ಡಿಕೆಶಿಗೆ ಅವಮಾನ ಮಾಡಲೆಂದೇ ಮೂರು ಡಿಸಿಎಂಗಳ ಬೇಡಿಕೆ ಇಟ್ಡಿದ್ದಾರೆ, ಮೂರು ಡಿಸಿಎಂಗೆ ಹೋಗುತ್ತದೋ, ಐದು ಡಿಸಿಎಂ ಗೆ ಹೋಗುತ್ತದೋ ಗೊತ್ತಿಲ್ಲ, ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯವರೆಗೆ ಈ ಸರ್ಕಾರ ಇರುತ್ತದೋ ಇಲ್ಲವೋ ಗೊತ್ತಿಲ್ಲ, ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆ ನಡೆಯುತ್ತಿದೆ ನಮ್ಮ ಸರಕಾರ ಇದ್ದಾಗ 40% ಸರಕಾರ ಅಂತಿದ್ದರು ಆದರೆ ಯಾವುದೇ ಒಬ್ಬ ಒಂದೇ ಒಂದು ಸಾಕ್ಷಿ‌ ಕೊಡಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ನಂತರ ಭ್ರಷ್ಟಾಚಾರ ನಡೆಯುತ್ತಿದೆ, ಒಬ್ಬೊಬ್ಬ ಅಧಿಕಾರಿಯಿಂದಲೂ‌ ಲಂಚ ಪಡೆಯುತ್ತಿದ್ದಾರೆ ಇದನ್ನು ಅವರ ಪಕ್ಷದ ಶಾಸಕರೇ ಆರೋಪ ಮಾಡುತ್ತಿದ್ದಾರೆ. 40% ಕ್ಕಿಂತ ಹೆಚ್ಚಿನ ಲಂಚವನ್ನು ಸಿದ್ದರಾಮಯ್ಯ, ಅವರ ಮಗ ಯತೀಂದ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಬೇಕಾದರೆ ನಾನು‌ ಸಾಕ್ಷಿ ಒದಗಿಸುತ್ತೇನೆ, ನಿವೃತ್ತ ನ್ಯಾಯಾಧೀಶರು ಅಥವಾ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸವಾಲ್ ಹಾಕಿದರು.

ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಆಗುತ್ತಿಲ್ಲ, ಒಂದು ಬುಟ್ಟಿ ಮಣ್ಣು ರಸ್ತೆಗೆ ಬಿದ್ದಿಲ್ಲ, ಪ್ರತಿ ಕ್ಷೇತ್ರಕ್ಕೆ 2 ಕೋಟಿ ರೂ ಕೊಡ್ತೀವಿ ಅಂದಿದ್ರು 50 ಲಕ್ಷ ರೂ ಬಿಡುಗಡೆ ಮಾಡುವುದಾಗಿ ಆದೇಶ ಕೊಟ್ಟಿದ್ದಾರೆ. ಅಭಿವೃದ್ಧಿ ಕಾರ್ಯ ನಡೆಯದಿದ್ದರೆ ಹೋರಾಟ ಅನಿವಾರ್ಯ ಎಂದು ಹೇಳಿದರು.

lokesh

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

2 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

3 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

3 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

3 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

4 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

4 hours ago