BREAKING NEWS

ಬೆಳಗಾವಿಗೆ ಡಿಕೆಶಿ ದಿಢೀರ್ ಭೇಟಿ : ಲಕ್ಷ್ಮಣ ಸವದಿ ನಿವಾಸದಲ್ಲಿ ಮಾತುಕತೆ

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಚುನಾವಣೆ, ಫಲಿತಾಂಶ ನಂತರ ಸರಕಾರ ರಚನೆ ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಒಂದಿಷ್ಟು ಜನರನ್ನು ಮಾತನಾಡಿಸಲು ಆಗಿರಲಿಲ್ಲ. ಇದೇ ಕಾರಣದಿಂದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಮಾತನಾಡಿಸಲು ಸ್ವತಃ ಬೆಳಗಾವಿಗೆ ಆಗಮಿಸಿದ್ದೇನೆ’’ ಎಂದರು.

“ಅವರಿಬ್ಬರೂ ನಮ್ಮ ಪಕ್ಷಕ್ಕೆ ಬಂದು ಇನ್ನಷ್ಟು ಶಕ್ತಿ ತುಂಬಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ಅವರಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಾಗಂತ ಅವರನ್ನು ಪಕ್ಷ ನಿರ್ಲಕ್ಷಿಸುವುದೂ ಇಲ್ಲ. ಕೈ ಬಿಡುವುದೂ ಇಲ್ಲ. ಮುಂದಿನ‌ ದಿನಗಳಲ್ಲಿ ಅವರಿಬ್ಬರಿಗೂ ಉತ್ತಮ ಅವಕಾಶಗಳು ಸಿಗುತ್ತವೆ’’ ಎಂದರು.

ಸಚಿವ ಸಂಪುಟ ಸ್ಥಾನ ಸಿಗಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅಸಮಾಧಾನ ಆಗಿದ್ದಾರೆ. ಅವರ ಜತೆಗೆ ನೇರವಾಗಿ ಮಾತನಾಡಿ ಅಸಮಾಧಾನ ಪಡಿಸುವ ಉದ್ಧೇಶದಿಂದ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಸವದಿ ಮನೆಗೆ ಸತೀಶ್ ಜಾರಕಿಹೊಳಿ ಹೋಗಿದ್ದು ವಿಶೇಷ : ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿ ಬರ ಮಾಡಿಕೊಂಡರು.

ನಂತರ ಡಿ.ಕೆ.ಶಿವಕುಮಾರ್ ನೇರವಾಗಿ ಬೆಳಗಾವಿ ನಗರದಲ್ಲಿರುವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಬುಧವಾರ ಬೆಳಗ್ಗೆ ಬೆಳಗಾವಿಯಿಂದ ಹುಬ್ವಳ್ಳಿಗೆ ತೆರಳಿ ಅಲ್ಲಿ ಜಗದೀಶ್ ಶೆಟ್ಟರ್ ಜತೆಗೆ ಮಾತುಕತೆ ಮಾಡಲಿದ್ದಾರೆ. ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಇವರೆಗೆ ರಾಜಕೀಯ ಎದುರಾಳಿ ಆಗಿದ್ದ ಲಕ್ಷ್ಮಣ ಸವದಿ ಮನೆಗೆ ಡಿ.ಕೆ.ಶಿವಕುಮಾರ ಜತೆಗೆ ತೆರಳಿರುವುದು ವಿಶೇಷ.

lokesh

Recent Posts

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

44 mins ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

53 mins ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

1 hour ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

2 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

2 hours ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

2 hours ago