BREAKING NEWS

ಬೆಳಗಾವಿಗೆ ಡಿಕೆಶಿ ದಿಢೀರ್ ಭೇಟಿ : ಲಕ್ಷ್ಮಣ ಸವದಿ ನಿವಾಸದಲ್ಲಿ ಮಾತುಕತೆ

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಚುನಾವಣೆ, ಫಲಿತಾಂಶ ನಂತರ ಸರಕಾರ ರಚನೆ ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಒಂದಿಷ್ಟು ಜನರನ್ನು ಮಾತನಾಡಿಸಲು ಆಗಿರಲಿಲ್ಲ. ಇದೇ ಕಾರಣದಿಂದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಮಾತನಾಡಿಸಲು ಸ್ವತಃ ಬೆಳಗಾವಿಗೆ ಆಗಮಿಸಿದ್ದೇನೆ’’ ಎಂದರು.

“ಅವರಿಬ್ಬರೂ ನಮ್ಮ ಪಕ್ಷಕ್ಕೆ ಬಂದು ಇನ್ನಷ್ಟು ಶಕ್ತಿ ತುಂಬಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ಅವರಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಾಗಂತ ಅವರನ್ನು ಪಕ್ಷ ನಿರ್ಲಕ್ಷಿಸುವುದೂ ಇಲ್ಲ. ಕೈ ಬಿಡುವುದೂ ಇಲ್ಲ. ಮುಂದಿನ‌ ದಿನಗಳಲ್ಲಿ ಅವರಿಬ್ಬರಿಗೂ ಉತ್ತಮ ಅವಕಾಶಗಳು ಸಿಗುತ್ತವೆ’’ ಎಂದರು.

ಸಚಿವ ಸಂಪುಟ ಸ್ಥಾನ ಸಿಗಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅಸಮಾಧಾನ ಆಗಿದ್ದಾರೆ. ಅವರ ಜತೆಗೆ ನೇರವಾಗಿ ಮಾತನಾಡಿ ಅಸಮಾಧಾನ ಪಡಿಸುವ ಉದ್ಧೇಶದಿಂದ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಸವದಿ ಮನೆಗೆ ಸತೀಶ್ ಜಾರಕಿಹೊಳಿ ಹೋಗಿದ್ದು ವಿಶೇಷ : ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿ ಬರ ಮಾಡಿಕೊಂಡರು.

ನಂತರ ಡಿ.ಕೆ.ಶಿವಕುಮಾರ್ ನೇರವಾಗಿ ಬೆಳಗಾವಿ ನಗರದಲ್ಲಿರುವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಬುಧವಾರ ಬೆಳಗ್ಗೆ ಬೆಳಗಾವಿಯಿಂದ ಹುಬ್ವಳ್ಳಿಗೆ ತೆರಳಿ ಅಲ್ಲಿ ಜಗದೀಶ್ ಶೆಟ್ಟರ್ ಜತೆಗೆ ಮಾತುಕತೆ ಮಾಡಲಿದ್ದಾರೆ. ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಇವರೆಗೆ ರಾಜಕೀಯ ಎದುರಾಳಿ ಆಗಿದ್ದ ಲಕ್ಷ್ಮಣ ಸವದಿ ಮನೆಗೆ ಡಿ.ಕೆ.ಶಿವಕುಮಾರ ಜತೆಗೆ ತೆರಳಿರುವುದು ವಿಶೇಷ.

lokesh

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

8 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago