BREAKING NEWS

ಬೆಳಗಾವಿಗೆ ಡಿಕೆಶಿ ದಿಢೀರ್ ಭೇಟಿ : ಲಕ್ಷ್ಮಣ ಸವದಿ ನಿವಾಸದಲ್ಲಿ ಮಾತುಕತೆ

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಚುನಾವಣೆ, ಫಲಿತಾಂಶ ನಂತರ ಸರಕಾರ ರಚನೆ ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಒಂದಿಷ್ಟು ಜನರನ್ನು ಮಾತನಾಡಿಸಲು ಆಗಿರಲಿಲ್ಲ. ಇದೇ ಕಾರಣದಿಂದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಮಾತನಾಡಿಸಲು ಸ್ವತಃ ಬೆಳಗಾವಿಗೆ ಆಗಮಿಸಿದ್ದೇನೆ’’ ಎಂದರು.

“ಅವರಿಬ್ಬರೂ ನಮ್ಮ ಪಕ್ಷಕ್ಕೆ ಬಂದು ಇನ್ನಷ್ಟು ಶಕ್ತಿ ತುಂಬಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ಅವರಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಾಗಂತ ಅವರನ್ನು ಪಕ್ಷ ನಿರ್ಲಕ್ಷಿಸುವುದೂ ಇಲ್ಲ. ಕೈ ಬಿಡುವುದೂ ಇಲ್ಲ. ಮುಂದಿನ‌ ದಿನಗಳಲ್ಲಿ ಅವರಿಬ್ಬರಿಗೂ ಉತ್ತಮ ಅವಕಾಶಗಳು ಸಿಗುತ್ತವೆ’’ ಎಂದರು.

ಸಚಿವ ಸಂಪುಟ ಸ್ಥಾನ ಸಿಗಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅಸಮಾಧಾನ ಆಗಿದ್ದಾರೆ. ಅವರ ಜತೆಗೆ ನೇರವಾಗಿ ಮಾತನಾಡಿ ಅಸಮಾಧಾನ ಪಡಿಸುವ ಉದ್ಧೇಶದಿಂದ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಸವದಿ ಮನೆಗೆ ಸತೀಶ್ ಜಾರಕಿಹೊಳಿ ಹೋಗಿದ್ದು ವಿಶೇಷ : ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿ ಬರ ಮಾಡಿಕೊಂಡರು.

ನಂತರ ಡಿ.ಕೆ.ಶಿವಕುಮಾರ್ ನೇರವಾಗಿ ಬೆಳಗಾವಿ ನಗರದಲ್ಲಿರುವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಬುಧವಾರ ಬೆಳಗ್ಗೆ ಬೆಳಗಾವಿಯಿಂದ ಹುಬ್ವಳ್ಳಿಗೆ ತೆರಳಿ ಅಲ್ಲಿ ಜಗದೀಶ್ ಶೆಟ್ಟರ್ ಜತೆಗೆ ಮಾತುಕತೆ ಮಾಡಲಿದ್ದಾರೆ. ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಇವರೆಗೆ ರಾಜಕೀಯ ಎದುರಾಳಿ ಆಗಿದ್ದ ಲಕ್ಷ್ಮಣ ಸವದಿ ಮನೆಗೆ ಡಿ.ಕೆ.ಶಿವಕುಮಾರ ಜತೆಗೆ ತೆರಳಿರುವುದು ವಿಶೇಷ.

lokesh

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago