BREAKING NEWS

ಬೆಳಗಾವಿಗೆ ಡಿಕೆಶಿ ದಿಢೀರ್ ಭೇಟಿ : ಲಕ್ಷ್ಮಣ ಸವದಿ ನಿವಾಸದಲ್ಲಿ ಮಾತುಕತೆ

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಚುನಾವಣೆ, ಫಲಿತಾಂಶ ನಂತರ ಸರಕಾರ ರಚನೆ ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಒಂದಿಷ್ಟು ಜನರನ್ನು ಮಾತನಾಡಿಸಲು ಆಗಿರಲಿಲ್ಲ. ಇದೇ ಕಾರಣದಿಂದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಮಾತನಾಡಿಸಲು ಸ್ವತಃ ಬೆಳಗಾವಿಗೆ ಆಗಮಿಸಿದ್ದೇನೆ’’ ಎಂದರು.

“ಅವರಿಬ್ಬರೂ ನಮ್ಮ ಪಕ್ಷಕ್ಕೆ ಬಂದು ಇನ್ನಷ್ಟು ಶಕ್ತಿ ತುಂಬಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ಅವರಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಾಗಂತ ಅವರನ್ನು ಪಕ್ಷ ನಿರ್ಲಕ್ಷಿಸುವುದೂ ಇಲ್ಲ. ಕೈ ಬಿಡುವುದೂ ಇಲ್ಲ. ಮುಂದಿನ‌ ದಿನಗಳಲ್ಲಿ ಅವರಿಬ್ಬರಿಗೂ ಉತ್ತಮ ಅವಕಾಶಗಳು ಸಿಗುತ್ತವೆ’’ ಎಂದರು.

ಸಚಿವ ಸಂಪುಟ ಸ್ಥಾನ ಸಿಗಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅಸಮಾಧಾನ ಆಗಿದ್ದಾರೆ. ಅವರ ಜತೆಗೆ ನೇರವಾಗಿ ಮಾತನಾಡಿ ಅಸಮಾಧಾನ ಪಡಿಸುವ ಉದ್ಧೇಶದಿಂದ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಸವದಿ ಮನೆಗೆ ಸತೀಶ್ ಜಾರಕಿಹೊಳಿ ಹೋಗಿದ್ದು ವಿಶೇಷ : ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿ ಬರ ಮಾಡಿಕೊಂಡರು.

ನಂತರ ಡಿ.ಕೆ.ಶಿವಕುಮಾರ್ ನೇರವಾಗಿ ಬೆಳಗಾವಿ ನಗರದಲ್ಲಿರುವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಬುಧವಾರ ಬೆಳಗ್ಗೆ ಬೆಳಗಾವಿಯಿಂದ ಹುಬ್ವಳ್ಳಿಗೆ ತೆರಳಿ ಅಲ್ಲಿ ಜಗದೀಶ್ ಶೆಟ್ಟರ್ ಜತೆಗೆ ಮಾತುಕತೆ ಮಾಡಲಿದ್ದಾರೆ. ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಇವರೆಗೆ ರಾಜಕೀಯ ಎದುರಾಳಿ ಆಗಿದ್ದ ಲಕ್ಷ್ಮಣ ಸವದಿ ಮನೆಗೆ ಡಿ.ಕೆ.ಶಿವಕುಮಾರ ಜತೆಗೆ ತೆರಳಿರುವುದು ವಿಶೇಷ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

6 hours ago