ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.
ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…