ತಮಿಳುನಾಡು: ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಮತ್ತು ಮಕ್ಕಳ್ ನೀಧಿ ಮೈಯ್ಯಮ್(ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಎಂಎನ್ಎಂ ಸ್ಪರ್ಧೆಯಿಂದ ಹಿಂದೆ ಸರಿದು ಡಿಎಂಕೆ ಪಕ್ಷವನ್ನು ಬೆಂಬಲಿಸಿದರೆ, ಮುಂದಿನ ಅಂದರೆ 2025ರ ರಾಜ್ಯ ಸಭೆ ಚುನವಾಣೆಯಲ್ಲಿ ಎಂಎನ್ಎಂ ಗೆ ಒಂದು ಸ್ಥಾನ ಬಿಟ್ಟುಕೊಡುವುದಾಗಿ ಒಪ್ಪಂದವಾಗಿದೆ.
ಶನಿವಾರ (ಮಾ.೦೯) ಡಿಎಂಕೆ ಪಕ್ಷದ ಕಾರ್ಯಾಲಯದಲ್ಲಿ ಕಮಲ್ ಹಾಸನ್ ಹಾಗೂ ಸಿಎಂ ಸ್ಟಾಲಿನ್ ಎರಡು ಪಕ್ಷಗಳ ನಡುವಿನ ಒಪ್ಪಂದವನ್ನು ಅಂತಿಮಗೊಳಿಸಿದರು.
ಯಾವುದೇ ಸ್ಥಾನ ಮಾನದ ಅಸೆಗಾಗಿ ನಾವು ಡಿಎಂಕೆ ಪಕ್ಷವನ್ನು ಬೆಂಬಲಿಸಿಲ್ಲ. ಬದಲಾಗಿ ದೇಶದ ಒಳಿತಿಗಾಗಿ ನಮ್ಮ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಿಎಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಎಂಎನ್ಎಂ ಪಕ್ಷದ ಕಮಲ್ ಹಾಸನ್ ಇದೇ ವೇಳೆ ತಿಳಿಸಿದರು.
ಈ ಒಪ್ಪಂದದ ಅನುಸಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಂಎನ್ಎಂ ಪಕ್ಷವೂ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಡಿಎಂಕೆ ಪರ ಪ್ರಚಾರ ನಡೆಸಲಿದೆ.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…