BREAKING NEWS

ಡಿಎಂಕೆ ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ ಸುಗ್ರೀವಾಜ್ಞೆ ಕುರಿತು ನಾವು ಚರ್ಚಿಸಿದ್ದೇವೆ. ಇದು ಪ್ರಜಾಸತ್ತಾತ್ಮಕವಲ್ಲದ ಮತ್ತು ಸಂವಿಧಾನ ವಿರೋಧಿ. ಎಎಪಿ ಮತ್ತು ದೆಹಲಿ ಜನತೆ ಪರವಾಗಿ ಡಿಎಂಕೆ ನಿಲ್ಲುತ್ತದೆ ಎಂದು ಸಿಎಂ ಸ್ಟಾಲಿನ್ ಭರವಸೆ ನೀಡಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

ನಾನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆಗೆ ಸಮಯಾವಕಾಶ ಕೇಳಿದ್ದೇನೆ ಮತ್ತು ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ. ಕಾಂಗ್ರೆಸ್ ನಮ್ಮನ್ನು ಬೆಂಬಲಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಕೇಜ್ರಿವಾಲ್ ಹೇಳಿದರು.

ಕೇಜ್ರಿವಾಲ್ ನನ್ನ ಉತ್ತಮ ಸ್ನೇಹಿತ, ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅನ್ನು ಬಳಸಿಕೊಂಡು ದೆಹಲಿ ಯುಟಿ ಮತ್ತು ಎಎಪಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ದೆಹಲಿಯಲ್ಲಿ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ತರಲಿದ್ದು, ಡಿಎಂಕೆ ಇದನ್ನು ತೀವ್ರವಾಗಿ ವಿರೋಧಿಸಲಿದೆ. ನಾವು ಇತರ ನಾಯಕರ ಅಭಿಪ್ರಾಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವಂತೆ ನಾನು ಎಲ್ಲ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದು ಸ್ಟಾಲಿನ್ ಹೇಳಿದರು.

ತಮಿಳುನಾಡು ಸಚಿವರು ಮತ್ತು ಎಎಪಿ ತಮಿಳುನಾಡು ಕಾರ್ಯಕರ್ತರು ದೆಹಲಿ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

andolanait

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

33 mins ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

7 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

7 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

7 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

7 hours ago