BREAKING NEWS

ಸುಧಾಕರ್​ ಅವರನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಹೇಗೆಲ್ಲ ಸಂಭ್ರಮಿಸಿದರು ಗೊತ್ತಾ? : ನೂತನ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಳ್ಳಾಪುರ : ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌, ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಾಂಗ್ರೆಸ್​ನ ನೂತನ ಶಾಸಕ ಪ್ರದೀಪ್ ಈಶ್ವರ್ ಮಾತಿನ ಶೈಲಿಗೆ ಎಲ್ಲರು ಫಿದಾ ಆಗಿದ್ದಾರೆ. ಅಲ್ಲದೇ ಇದೀಗ ಶಾಸಕರಾಗಿ ಆಯ್ಕೆಯಾದ ಐದು ದಿನ ಆಯಿತು ಅಷ್ಟೇ ಆಗಲಿ ಕ್ಷೇತ್ರದಲ್ಲಿ ಮನೆಮನೆ ರೌಂಡ್ಸ್​ ಹಾಕುತ್ತಿದ್ದಾರೆ. ಇಂದು ಮೊದಲಿಗೆ ಮೈಲಪ್ಪನಹಳ್ಳಿ ಗ್ರಾಮದಿಂದ ಮನೆ ಮನೆಗೆ ಭೇಟಿ ಆರಂಭಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಸುಧಾಕರ್ ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲುಕುಡಿದಷ್ಟು ಖುಷಿಪಟ್ಟರು ಎಂದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದಲ್ಲಿ ಪ್ರದೀಪ್ ಈಶ್ವರ್ ಮಾತನಾಡಿದ ಪ್ರದೀಪ್ ಈಶ್ವರ್, ಡಿ.ಕೆ.ಶಿವಕುಮಾರ್ ನನ್ನನ್ನು ಅಭಿನಂದಿಸಿ ಆಶೀರ್ವಾದ ಮಾಡಿದರು. ಕೆ.ಸಿ.ವೇಣುಗೋಪಾಲ್ ತಬ್ಬಿಕೊಂಡು ಸಂತೋಷ ಹಂಚಿಕೊಂಡರು. ಸುಧಾಕರ್ ವಿರುದ್ಧ ಗೆದ್ದಿದ್ದಕ್ಕೆ ನನ್ನನ್ನು ಸೆಲೆಬ್ರಿಟಿ ರೀತಿ ನೋಡುತ್ತಿದ್ದಾರೆ. ಜನರ ಪ್ರೀತಿ ಅಭಿಮಾನ ವಿಶ್ವಾಸಕ್ಕೆ ಚಿರಋಣಿ. ನಾನು ನಿರಂತರವಾಗಿ ಕ್ಷೇತ್ರದ ಜನರ ಜೊತೆ ಇರಲು ಬಯಸುತ್ತೇನೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಕಷ್ಟ, ಸುಖದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ನನ್ನ ಕಾರು ಅಡ್ಡ ನಿಲ್ಲಿಸಿ ಜನ ಸೆಲ್ಫೀ ತೆಗೆದುಕೊಳ್ಳುತ್ತಿದ್ದಾರೆ. ಮಾಜಿ ಶಾಸಕರಂತೆ ನಾನು ಅಹಂಕಾರ ಪಡುವವನಲ್ಲ. ನಾನು ನಿರಂತರ ಜನರ ಜೊತೆ ಇರಲು ಬಯಸುತ್ತೇನೆ . ಜನರ ಕಷ್ಟ ಸುಖಗಳಿಗೆ ಬಾಗಿಯಾಗುತ್ತೇನೆ. ಮಾದರಿ ಶಾಸಕನಾಗಲು ಅಧ್ಯಯನ ನಡೆಸಿದ್ದೇನೆ ಎಂದು ಎಂದರು.

ಇಡೀ ರಾಜ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ನೋಡುತ್ತಿದೆ. ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಏಳೆಂಟು ವರ್ಷಗಳ ಹಿಂದೆ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ.

ತಮ್ಮ ತೆಲುಗು ಡೈಲಾಗ್‌ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್‌ ಈಶ್ವರ್‌ ಗಮನ ಸೆಳೆದಿದ್ದರು. ಸಚಿವ ಡಾ. ಕೆ ಸುಧಾಕರ್‌ ಅವರಿಗೆ ಚುನಾವಣಾ ಕಣದಲ್ಲಿ ತಕ್ಕ ತಿರುಗೇಟು ನೀಡಿದ್ದರು. ಅದರ ಪರಿಣಾಮವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಇಡೀ ರಾಜ್ಯವೇ ನೋಡುವಂತಹ ಫಲಿತಾಂಶ ಹೊರಬಿದ್ದಿದೆ. ಚಿಕ್ಕಬಳ್ಳಾಪುರದ ಜನ ಈ ಬಾರಿ ಬದಲಾವಣೆ ಬಯಸಿ ಪ್ರದೀಪ್‌ ಈಶ್ವರ್‌ ಅವರನ್ನು ಗೆಲ್ಲಿಸಿದ್ದಾರೆ.

lokesh

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

2 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

2 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

12 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

18 hours ago