BREAKING NEWS

ಸುಧಾಕರ್​ ಅವರನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಹೇಗೆಲ್ಲ ಸಂಭ್ರಮಿಸಿದರು ಗೊತ್ತಾ? : ನೂತನ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಳ್ಳಾಪುರ : ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌, ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಾಂಗ್ರೆಸ್​ನ ನೂತನ ಶಾಸಕ ಪ್ರದೀಪ್ ಈಶ್ವರ್ ಮಾತಿನ ಶೈಲಿಗೆ ಎಲ್ಲರು ಫಿದಾ ಆಗಿದ್ದಾರೆ. ಅಲ್ಲದೇ ಇದೀಗ ಶಾಸಕರಾಗಿ ಆಯ್ಕೆಯಾದ ಐದು ದಿನ ಆಯಿತು ಅಷ್ಟೇ ಆಗಲಿ ಕ್ಷೇತ್ರದಲ್ಲಿ ಮನೆಮನೆ ರೌಂಡ್ಸ್​ ಹಾಕುತ್ತಿದ್ದಾರೆ. ಇಂದು ಮೊದಲಿಗೆ ಮೈಲಪ್ಪನಹಳ್ಳಿ ಗ್ರಾಮದಿಂದ ಮನೆ ಮನೆಗೆ ಭೇಟಿ ಆರಂಭಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಸುಧಾಕರ್ ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲುಕುಡಿದಷ್ಟು ಖುಷಿಪಟ್ಟರು ಎಂದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದಲ್ಲಿ ಪ್ರದೀಪ್ ಈಶ್ವರ್ ಮಾತನಾಡಿದ ಪ್ರದೀಪ್ ಈಶ್ವರ್, ಡಿ.ಕೆ.ಶಿವಕುಮಾರ್ ನನ್ನನ್ನು ಅಭಿನಂದಿಸಿ ಆಶೀರ್ವಾದ ಮಾಡಿದರು. ಕೆ.ಸಿ.ವೇಣುಗೋಪಾಲ್ ತಬ್ಬಿಕೊಂಡು ಸಂತೋಷ ಹಂಚಿಕೊಂಡರು. ಸುಧಾಕರ್ ವಿರುದ್ಧ ಗೆದ್ದಿದ್ದಕ್ಕೆ ನನ್ನನ್ನು ಸೆಲೆಬ್ರಿಟಿ ರೀತಿ ನೋಡುತ್ತಿದ್ದಾರೆ. ಜನರ ಪ್ರೀತಿ ಅಭಿಮಾನ ವಿಶ್ವಾಸಕ್ಕೆ ಚಿರಋಣಿ. ನಾನು ನಿರಂತರವಾಗಿ ಕ್ಷೇತ್ರದ ಜನರ ಜೊತೆ ಇರಲು ಬಯಸುತ್ತೇನೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಕಷ್ಟ, ಸುಖದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ನನ್ನ ಕಾರು ಅಡ್ಡ ನಿಲ್ಲಿಸಿ ಜನ ಸೆಲ್ಫೀ ತೆಗೆದುಕೊಳ್ಳುತ್ತಿದ್ದಾರೆ. ಮಾಜಿ ಶಾಸಕರಂತೆ ನಾನು ಅಹಂಕಾರ ಪಡುವವನಲ್ಲ. ನಾನು ನಿರಂತರ ಜನರ ಜೊತೆ ಇರಲು ಬಯಸುತ್ತೇನೆ . ಜನರ ಕಷ್ಟ ಸುಖಗಳಿಗೆ ಬಾಗಿಯಾಗುತ್ತೇನೆ. ಮಾದರಿ ಶಾಸಕನಾಗಲು ಅಧ್ಯಯನ ನಡೆಸಿದ್ದೇನೆ ಎಂದು ಎಂದರು.

ಇಡೀ ರಾಜ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ನೋಡುತ್ತಿದೆ. ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಏಳೆಂಟು ವರ್ಷಗಳ ಹಿಂದೆ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ.

ತಮ್ಮ ತೆಲುಗು ಡೈಲಾಗ್‌ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್‌ ಈಶ್ವರ್‌ ಗಮನ ಸೆಳೆದಿದ್ದರು. ಸಚಿವ ಡಾ. ಕೆ ಸುಧಾಕರ್‌ ಅವರಿಗೆ ಚುನಾವಣಾ ಕಣದಲ್ಲಿ ತಕ್ಕ ತಿರುಗೇಟು ನೀಡಿದ್ದರು. ಅದರ ಪರಿಣಾಮವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಇಡೀ ರಾಜ್ಯವೇ ನೋಡುವಂತಹ ಫಲಿತಾಂಶ ಹೊರಬಿದ್ದಿದೆ. ಚಿಕ್ಕಬಳ್ಳಾಪುರದ ಜನ ಈ ಬಾರಿ ಬದಲಾವಣೆ ಬಯಸಿ ಪ್ರದೀಪ್‌ ಈಶ್ವರ್‌ ಅವರನ್ನು ಗೆಲ್ಲಿಸಿದ್ದಾರೆ.

lokesh

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago