BREAKING NEWS

ಜೊಲ್ಲೆ ಕುಟುಂಬದ ಆಸ್ತಿ ಎಷ್ಟು ಗೊತ್ತಾ ?

ನಿಪ್ಪಾಣಿ : ನಿಪ್ಪಾಣಿ ಶಾಸಕಿ, ಮುಜರಾಯಿ ಸಚಿವೆ ಶಶಿಕಲಾ ಜಿಲ್ಲೆ ಅವರು ₹11.6 ಕೋಟಿ ಮೌಲ್ಯದ ಚರಾಸ್ತಿಗಳು ಹಾಗೂ ₹ 56.98 ಕೊಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿ ₹68.58 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಶಿಕಲಾ ಒಬ್ಬರಿಗೇ ₹1.03 ಕೋಟಿ ವಾರ್ಷಿಕ ಆದಾಯವಿದೆ.
ಶಶಿಕಲಾ ಹೆಸರಲ್ಲಿ ₹3.9 ಕೋಟಿ ಹಾಗೂ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೆಸರಲ್ಲಿ ₹5.73 ಕೋಟಿ, ಪುತ್ರರ ಹೆಸರಲ್ಲಿ ₹1.17 ಕೋಟಿ ಹಾಗೂ ಇತರರ ಹೆಸರಲ್ಲಿ ₹26 ಲಕ್ಷ ಮೌಲ್ಯದ ಚರಾಸ್ತಿಗಳು ಇವೆ.
ಸಚಿವೆ ಹೆಸರಲ್ಲಿ ₹24.13 ಕೋಟಿಯ ಸ್ಥಿರಾಸ್ತಿ, ಪತಿ ಹೆಸರಲ್ಲಿ ₹15.04 ಕೋಟಿ, ಪುತ್ರನ ಹೆಸರಲ್ಲಿ ₹17.81 ಕೋಟಿ ಸೇರಿ ಒಟ್ಟು ₹ 56.98 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಅವರ ಕುಟುಂಬ ಹೊಂದಿದೆ.ಅಲ್ಲದೇ, ₹42.81 ಲಕ್ಷ ಹಣ ಅವರ ಬ್ಯಾಂಕ್ ಖಾತೆಯಲ್ಲಿದೆ.

ಇಡೀ ಕುಟುಂಬದ ಖಾತೆಯಲ್ಲಿ ₹2.19 ಕೋಟಿ ಹಣವಿದೆ. ₹ 1.87 ಕೋಟಿ ಮೌಲ್ಯದ ವಿವಿಧ ಷೇರು ಹಾಗೂ ಬಾಂಡ್‌ಗಳನ್ನು ಅವರು ಖರೀದಿಸಿದ್ದು, ಕುಟುಂಬದಲ್ಲಿ ₹5.9 ಕೋಟಿ ಮೌಲ್ಯದ ಇಂಥ ಆಸ್ತಿ ಇದೆ. ಉಳಿತಾಯ ಹಾಗೂ ವಿಮೆಗಳ ಮೊತ್ತ ಸುಮಾರು ₹76.95 ಲಕ್ಷ.

ಶಶಿಕಲಾ ಅವರೇ ವಿವಿಧ ಬ್ಯಾಂಕುಗಳಿಂದ ₹ 80 ಲಕ್ಷ ವೈಯಕ್ತಿಕ ಸಾಲ ಹಾಗೂ ₹ 9.05 ಕೋಟಿ ವಿವಿಧ ಸಾಲಗಳನ್ನು ಪಡೆದಿದ್ದಾರೆ. ಕುಟುಂಬದ ತಲೆಯ ಮೇಲೆ ₹22.41 ಕೋಟಿ ಸಾಲವಿದೆ.

₹ 73 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಕುಟುಂಬದಲ್ಲಿ ₹1.45 ಕೋಟಿಯ ಚಿನ್ನ ಹಾಗೂ ಬೆಳ್ಳಿ ಆರಭರಣಗಳಿವೆ. ವಿವಿಧ ಗ್ರಾಮಗಳಲ್ಲಿ ₹ 3.9 ಕೋಟಿ ಮೌಲ್ಯದ ಕೃಷಿ ಜಮೀನು ಶಶಿಕಲಾ ಹೊಂದಿದ್ದು, ₹ 11.76 ಕೋಟಿಯ ಜಮೀನು ಕುಟುಂಬಕ್ಕಿದೆ. ₹ 15.20 ಕೋಟಿಯ ವಾಣಿಜ್ಯ ಭೂಮಿಯನ್ನು ಶಶಿಕಲಾ ಹೊಂದಿದ್ದಾರೆ. ₹ 21.85 ಕೋಟಿ ಮೌಲ್ಯದ ವಾಣಿಜ್ಯ ಭೂಮಿ ಕುಟುಂಬಕ್ಕಿದೆ.

ಶಶಿಕಲಾ ಜೊಲ್ಲೆ ನೀಡಿದ ಆಸ್ತಿ ವಿವರದಲ್ಲಿ ಆಕಳು, ಎಮ್ಮೆ, ನಾಯಿಗಳೂ ಸೇರಿವೆ. ತಮ್ಮ ಬಳಿ 10 ಹೈಬ್ರೀಡ್‌ ಹಸುಗಳು, 17 ದೇಸಿ ಹಸುಗಳು, 6 ಎಮ್ಮೆ, ಒಂದು ಕುದುರೆ ಹಾಗೂ 4 ನಾಯಿಗಳು ಇವೆ ಎಂದೂ ಅವರು ಘೋಷಿಸಿಕೊಂಡಿದ್ದಾರೆ. ಆದರೆ, ಇವುಗಳ ಮೌಲ್ಯ ನಮೂದಿಸಿಲ್ಲ.

lokesh

Recent Posts

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

20 mins ago

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

2 hours ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

2 hours ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

3 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

3 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

3 hours ago