BREAKING NEWS

ಜೊಲ್ಲೆ ಕುಟುಂಬದ ಆಸ್ತಿ ಎಷ್ಟು ಗೊತ್ತಾ ?

ನಿಪ್ಪಾಣಿ : ನಿಪ್ಪಾಣಿ ಶಾಸಕಿ, ಮುಜರಾಯಿ ಸಚಿವೆ ಶಶಿಕಲಾ ಜಿಲ್ಲೆ ಅವರು ₹11.6 ಕೋಟಿ ಮೌಲ್ಯದ ಚರಾಸ್ತಿಗಳು ಹಾಗೂ ₹ 56.98 ಕೊಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿ ₹68.58 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಶಿಕಲಾ ಒಬ್ಬರಿಗೇ ₹1.03 ಕೋಟಿ ವಾರ್ಷಿಕ ಆದಾಯವಿದೆ.
ಶಶಿಕಲಾ ಹೆಸರಲ್ಲಿ ₹3.9 ಕೋಟಿ ಹಾಗೂ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೆಸರಲ್ಲಿ ₹5.73 ಕೋಟಿ, ಪುತ್ರರ ಹೆಸರಲ್ಲಿ ₹1.17 ಕೋಟಿ ಹಾಗೂ ಇತರರ ಹೆಸರಲ್ಲಿ ₹26 ಲಕ್ಷ ಮೌಲ್ಯದ ಚರಾಸ್ತಿಗಳು ಇವೆ.
ಸಚಿವೆ ಹೆಸರಲ್ಲಿ ₹24.13 ಕೋಟಿಯ ಸ್ಥಿರಾಸ್ತಿ, ಪತಿ ಹೆಸರಲ್ಲಿ ₹15.04 ಕೋಟಿ, ಪುತ್ರನ ಹೆಸರಲ್ಲಿ ₹17.81 ಕೋಟಿ ಸೇರಿ ಒಟ್ಟು ₹ 56.98 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಅವರ ಕುಟುಂಬ ಹೊಂದಿದೆ.ಅಲ್ಲದೇ, ₹42.81 ಲಕ್ಷ ಹಣ ಅವರ ಬ್ಯಾಂಕ್ ಖಾತೆಯಲ್ಲಿದೆ.

ಇಡೀ ಕುಟುಂಬದ ಖಾತೆಯಲ್ಲಿ ₹2.19 ಕೋಟಿ ಹಣವಿದೆ. ₹ 1.87 ಕೋಟಿ ಮೌಲ್ಯದ ವಿವಿಧ ಷೇರು ಹಾಗೂ ಬಾಂಡ್‌ಗಳನ್ನು ಅವರು ಖರೀದಿಸಿದ್ದು, ಕುಟುಂಬದಲ್ಲಿ ₹5.9 ಕೋಟಿ ಮೌಲ್ಯದ ಇಂಥ ಆಸ್ತಿ ಇದೆ. ಉಳಿತಾಯ ಹಾಗೂ ವಿಮೆಗಳ ಮೊತ್ತ ಸುಮಾರು ₹76.95 ಲಕ್ಷ.

ಶಶಿಕಲಾ ಅವರೇ ವಿವಿಧ ಬ್ಯಾಂಕುಗಳಿಂದ ₹ 80 ಲಕ್ಷ ವೈಯಕ್ತಿಕ ಸಾಲ ಹಾಗೂ ₹ 9.05 ಕೋಟಿ ವಿವಿಧ ಸಾಲಗಳನ್ನು ಪಡೆದಿದ್ದಾರೆ. ಕುಟುಂಬದ ತಲೆಯ ಮೇಲೆ ₹22.41 ಕೋಟಿ ಸಾಲವಿದೆ.

₹ 73 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಕುಟುಂಬದಲ್ಲಿ ₹1.45 ಕೋಟಿಯ ಚಿನ್ನ ಹಾಗೂ ಬೆಳ್ಳಿ ಆರಭರಣಗಳಿವೆ. ವಿವಿಧ ಗ್ರಾಮಗಳಲ್ಲಿ ₹ 3.9 ಕೋಟಿ ಮೌಲ್ಯದ ಕೃಷಿ ಜಮೀನು ಶಶಿಕಲಾ ಹೊಂದಿದ್ದು, ₹ 11.76 ಕೋಟಿಯ ಜಮೀನು ಕುಟುಂಬಕ್ಕಿದೆ. ₹ 15.20 ಕೋಟಿಯ ವಾಣಿಜ್ಯ ಭೂಮಿಯನ್ನು ಶಶಿಕಲಾ ಹೊಂದಿದ್ದಾರೆ. ₹ 21.85 ಕೋಟಿ ಮೌಲ್ಯದ ವಾಣಿಜ್ಯ ಭೂಮಿ ಕುಟುಂಬಕ್ಕಿದೆ.

ಶಶಿಕಲಾ ಜೊಲ್ಲೆ ನೀಡಿದ ಆಸ್ತಿ ವಿವರದಲ್ಲಿ ಆಕಳು, ಎಮ್ಮೆ, ನಾಯಿಗಳೂ ಸೇರಿವೆ. ತಮ್ಮ ಬಳಿ 10 ಹೈಬ್ರೀಡ್‌ ಹಸುಗಳು, 17 ದೇಸಿ ಹಸುಗಳು, 6 ಎಮ್ಮೆ, ಒಂದು ಕುದುರೆ ಹಾಗೂ 4 ನಾಯಿಗಳು ಇವೆ ಎಂದೂ ಅವರು ಘೋಷಿಸಿಕೊಂಡಿದ್ದಾರೆ. ಆದರೆ, ಇವುಗಳ ಮೌಲ್ಯ ನಮೂದಿಸಿಲ್ಲ.

lokesh

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

31 mins ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

6 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

6 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago