BREAKING NEWS

ಜೊಲ್ಲೆ ಕುಟುಂಬದ ಆಸ್ತಿ ಎಷ್ಟು ಗೊತ್ತಾ ?

ನಿಪ್ಪಾಣಿ : ನಿಪ್ಪಾಣಿ ಶಾಸಕಿ, ಮುಜರಾಯಿ ಸಚಿವೆ ಶಶಿಕಲಾ ಜಿಲ್ಲೆ ಅವರು ₹11.6 ಕೋಟಿ ಮೌಲ್ಯದ ಚರಾಸ್ತಿಗಳು ಹಾಗೂ ₹ 56.98 ಕೊಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿ ₹68.58 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಶಿಕಲಾ ಒಬ್ಬರಿಗೇ ₹1.03 ಕೋಟಿ ವಾರ್ಷಿಕ ಆದಾಯವಿದೆ.
ಶಶಿಕಲಾ ಹೆಸರಲ್ಲಿ ₹3.9 ಕೋಟಿ ಹಾಗೂ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೆಸರಲ್ಲಿ ₹5.73 ಕೋಟಿ, ಪುತ್ರರ ಹೆಸರಲ್ಲಿ ₹1.17 ಕೋಟಿ ಹಾಗೂ ಇತರರ ಹೆಸರಲ್ಲಿ ₹26 ಲಕ್ಷ ಮೌಲ್ಯದ ಚರಾಸ್ತಿಗಳು ಇವೆ.
ಸಚಿವೆ ಹೆಸರಲ್ಲಿ ₹24.13 ಕೋಟಿಯ ಸ್ಥಿರಾಸ್ತಿ, ಪತಿ ಹೆಸರಲ್ಲಿ ₹15.04 ಕೋಟಿ, ಪುತ್ರನ ಹೆಸರಲ್ಲಿ ₹17.81 ಕೋಟಿ ಸೇರಿ ಒಟ್ಟು ₹ 56.98 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಅವರ ಕುಟುಂಬ ಹೊಂದಿದೆ.ಅಲ್ಲದೇ, ₹42.81 ಲಕ್ಷ ಹಣ ಅವರ ಬ್ಯಾಂಕ್ ಖಾತೆಯಲ್ಲಿದೆ.

ಇಡೀ ಕುಟುಂಬದ ಖಾತೆಯಲ್ಲಿ ₹2.19 ಕೋಟಿ ಹಣವಿದೆ. ₹ 1.87 ಕೋಟಿ ಮೌಲ್ಯದ ವಿವಿಧ ಷೇರು ಹಾಗೂ ಬಾಂಡ್‌ಗಳನ್ನು ಅವರು ಖರೀದಿಸಿದ್ದು, ಕುಟುಂಬದಲ್ಲಿ ₹5.9 ಕೋಟಿ ಮೌಲ್ಯದ ಇಂಥ ಆಸ್ತಿ ಇದೆ. ಉಳಿತಾಯ ಹಾಗೂ ವಿಮೆಗಳ ಮೊತ್ತ ಸುಮಾರು ₹76.95 ಲಕ್ಷ.

ಶಶಿಕಲಾ ಅವರೇ ವಿವಿಧ ಬ್ಯಾಂಕುಗಳಿಂದ ₹ 80 ಲಕ್ಷ ವೈಯಕ್ತಿಕ ಸಾಲ ಹಾಗೂ ₹ 9.05 ಕೋಟಿ ವಿವಿಧ ಸಾಲಗಳನ್ನು ಪಡೆದಿದ್ದಾರೆ. ಕುಟುಂಬದ ತಲೆಯ ಮೇಲೆ ₹22.41 ಕೋಟಿ ಸಾಲವಿದೆ.

₹ 73 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಕುಟುಂಬದಲ್ಲಿ ₹1.45 ಕೋಟಿಯ ಚಿನ್ನ ಹಾಗೂ ಬೆಳ್ಳಿ ಆರಭರಣಗಳಿವೆ. ವಿವಿಧ ಗ್ರಾಮಗಳಲ್ಲಿ ₹ 3.9 ಕೋಟಿ ಮೌಲ್ಯದ ಕೃಷಿ ಜಮೀನು ಶಶಿಕಲಾ ಹೊಂದಿದ್ದು, ₹ 11.76 ಕೋಟಿಯ ಜಮೀನು ಕುಟುಂಬಕ್ಕಿದೆ. ₹ 15.20 ಕೋಟಿಯ ವಾಣಿಜ್ಯ ಭೂಮಿಯನ್ನು ಶಶಿಕಲಾ ಹೊಂದಿದ್ದಾರೆ. ₹ 21.85 ಕೋಟಿ ಮೌಲ್ಯದ ವಾಣಿಜ್ಯ ಭೂಮಿ ಕುಟುಂಬಕ್ಕಿದೆ.

ಶಶಿಕಲಾ ಜೊಲ್ಲೆ ನೀಡಿದ ಆಸ್ತಿ ವಿವರದಲ್ಲಿ ಆಕಳು, ಎಮ್ಮೆ, ನಾಯಿಗಳೂ ಸೇರಿವೆ. ತಮ್ಮ ಬಳಿ 10 ಹೈಬ್ರೀಡ್‌ ಹಸುಗಳು, 17 ದೇಸಿ ಹಸುಗಳು, 6 ಎಮ್ಮೆ, ಒಂದು ಕುದುರೆ ಹಾಗೂ 4 ನಾಯಿಗಳು ಇವೆ ಎಂದೂ ಅವರು ಘೋಷಿಸಿಕೊಂಡಿದ್ದಾರೆ. ಆದರೆ, ಇವುಗಳ ಮೌಲ್ಯ ನಮೂದಿಸಿಲ್ಲ.

lokesh

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago