ನಿಪ್ಪಾಣಿ : ನಿಪ್ಪಾಣಿ ಶಾಸಕಿ, ಮುಜರಾಯಿ ಸಚಿವೆ ಶಶಿಕಲಾ ಜಿಲ್ಲೆ ಅವರು ₹11.6 ಕೋಟಿ ಮೌಲ್ಯದ ಚರಾಸ್ತಿಗಳು ಹಾಗೂ ₹ 56.98 ಕೊಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿ ₹68.58 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಶಿಕಲಾ ಒಬ್ಬರಿಗೇ ₹1.03 ಕೋಟಿ ವಾರ್ಷಿಕ ಆದಾಯವಿದೆ.
ಶಶಿಕಲಾ ಹೆಸರಲ್ಲಿ ₹3.9 ಕೋಟಿ ಹಾಗೂ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೆಸರಲ್ಲಿ ₹5.73 ಕೋಟಿ, ಪುತ್ರರ ಹೆಸರಲ್ಲಿ ₹1.17 ಕೋಟಿ ಹಾಗೂ ಇತರರ ಹೆಸರಲ್ಲಿ ₹26 ಲಕ್ಷ ಮೌಲ್ಯದ ಚರಾಸ್ತಿಗಳು ಇವೆ.
ಸಚಿವೆ ಹೆಸರಲ್ಲಿ ₹24.13 ಕೋಟಿಯ ಸ್ಥಿರಾಸ್ತಿ, ಪತಿ ಹೆಸರಲ್ಲಿ ₹15.04 ಕೋಟಿ, ಪುತ್ರನ ಹೆಸರಲ್ಲಿ ₹17.81 ಕೋಟಿ ಸೇರಿ ಒಟ್ಟು ₹ 56.98 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಅವರ ಕುಟುಂಬ ಹೊಂದಿದೆ.ಅಲ್ಲದೇ, ₹42.81 ಲಕ್ಷ ಹಣ ಅವರ ಬ್ಯಾಂಕ್ ಖಾತೆಯಲ್ಲಿದೆ.
ಇಡೀ ಕುಟುಂಬದ ಖಾತೆಯಲ್ಲಿ ₹2.19 ಕೋಟಿ ಹಣವಿದೆ. ₹ 1.87 ಕೋಟಿ ಮೌಲ್ಯದ ವಿವಿಧ ಷೇರು ಹಾಗೂ ಬಾಂಡ್ಗಳನ್ನು ಅವರು ಖರೀದಿಸಿದ್ದು, ಕುಟುಂಬದಲ್ಲಿ ₹5.9 ಕೋಟಿ ಮೌಲ್ಯದ ಇಂಥ ಆಸ್ತಿ ಇದೆ. ಉಳಿತಾಯ ಹಾಗೂ ವಿಮೆಗಳ ಮೊತ್ತ ಸುಮಾರು ₹76.95 ಲಕ್ಷ.
ಶಶಿಕಲಾ ಅವರೇ ವಿವಿಧ ಬ್ಯಾಂಕುಗಳಿಂದ ₹ 80 ಲಕ್ಷ ವೈಯಕ್ತಿಕ ಸಾಲ ಹಾಗೂ ₹ 9.05 ಕೋಟಿ ವಿವಿಧ ಸಾಲಗಳನ್ನು ಪಡೆದಿದ್ದಾರೆ. ಕುಟುಂಬದ ತಲೆಯ ಮೇಲೆ ₹22.41 ಕೋಟಿ ಸಾಲವಿದೆ.
₹ 73 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಕುಟುಂಬದಲ್ಲಿ ₹1.45 ಕೋಟಿಯ ಚಿನ್ನ ಹಾಗೂ ಬೆಳ್ಳಿ ಆರಭರಣಗಳಿವೆ. ವಿವಿಧ ಗ್ರಾಮಗಳಲ್ಲಿ ₹ 3.9 ಕೋಟಿ ಮೌಲ್ಯದ ಕೃಷಿ ಜಮೀನು ಶಶಿಕಲಾ ಹೊಂದಿದ್ದು, ₹ 11.76 ಕೋಟಿಯ ಜಮೀನು ಕುಟುಂಬಕ್ಕಿದೆ. ₹ 15.20 ಕೋಟಿಯ ವಾಣಿಜ್ಯ ಭೂಮಿಯನ್ನು ಶಶಿಕಲಾ ಹೊಂದಿದ್ದಾರೆ. ₹ 21.85 ಕೋಟಿ ಮೌಲ್ಯದ ವಾಣಿಜ್ಯ ಭೂಮಿ ಕುಟುಂಬಕ್ಕಿದೆ.
ಶಶಿಕಲಾ ಜೊಲ್ಲೆ ನೀಡಿದ ಆಸ್ತಿ ವಿವರದಲ್ಲಿ ಆಕಳು, ಎಮ್ಮೆ, ನಾಯಿಗಳೂ ಸೇರಿವೆ. ತಮ್ಮ ಬಳಿ 10 ಹೈಬ್ರೀಡ್ ಹಸುಗಳು, 17 ದೇಸಿ ಹಸುಗಳು, 6 ಎಮ್ಮೆ, ಒಂದು ಕುದುರೆ ಹಾಗೂ 4 ನಾಯಿಗಳು ಇವೆ ಎಂದೂ ಅವರು ಘೋಷಿಸಿಕೊಂಡಿದ್ದಾರೆ. ಆದರೆ, ಇವುಗಳ ಮೌಲ್ಯ ನಮೂದಿಸಿಲ್ಲ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…