ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ ಅತಿಹೆಚ್ಚು ಹುಲಿಗಳು ಹೊಂದಿದ ಎರಡನೇ ಟೈಗರ್ ರಿಸರ್ವ್ ಆಗಿ ಗುರುತಿಸಿಕೊಂಡಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 191 ಹುಲಿಗಳಿವೆ ಎಂದು ಅಂದಾಜು ಮಾಡಲಾಗಿದೆ. ನಾಗರಹೊಳೆ ಸಂರಕ್ಷಿತಾರಣ್ಯದಲ್ಲಿ 185, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 60, ಭದ್ರಾದಲ್ಲಿ 44 ಹಾಗೂ ಕಾಳಿಯಲ್ಲಿ 29 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿದೆ.
ಜಿಂ ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ 319 ವ್ಯಾಘ್ರಗಳಿದ್ದು, ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಕ್ಷಿತಾರಣ್ಯವಾಗಿದೆ. ಬಂಡೀಪುರ ಎರಡನೇ ಸ್ಥಾನದಲ್ಲಿದೆ. ಇನ್ನು ಕರ್ನಾಟಕದಲ್ಲಿ ಬಂಡೀಪುರ ಮೊದಲ ಸ್ಥಾನದಲ್ಲಿದ್ದು, ನಾಗರಹೊಳೆ ಎರಡನೇ ಸ್ಥಾನದಲ್ಲಿದ್ದು, ಬಿಆರ್ಟಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತಾರಣ್ಯಗಳಲ್ಲಿ ಮೊದಲ ಹಾಗೂ ಮೂರನೇ ಸ್ಥಾನ ಪಡೆಯುವ ಮೂಲಕ ಚಾಮರಾಜನಗರ ಹುಲಿಗಳ ನಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…