ಮೈಸೂರು : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ನೆನ್ನೆ ಕೆಆರ್ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ ಹೊರಟಿದ್ದ ವೇಳೆ ರಾಮಪುರ ಗೇಟ್ ಬಳಿ ಭವಾನಿ ರೇವಣ್ಣ ಅವರ ಕಾರಿಗೆ ಎದುರಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗ ಸ್ವಲ್ಪ ಸ್ಕ್ಯಾಚ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಬೈಕ್ ಸವಾರನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾಯುವ ಹಾಗಿದ್ದರೆ ಬಸ್ಸಿಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನೀನು ಸಾಯೋಕೆ ನನ್ನ ಕಾರೇ ಬೇಕಿತ್ತಾ ? ಡ್ಯಾಮೆಜ್ ಮಾಡೋಕೆ ನೀನ್ಯಾವೊನು. ಅವನು ಸತ್ರೆ ಸಾಯಲಿ. ನನ್ನ ಗಾಡಿ ಯಾರು ರಿಪೇರಿ ಮಾಡಿಸಿಕೊಡ್ತಾರೆ. ಈಗ ರಿಪೇರಿ ಮಾಡಿಸೋಕೆ ಐವತ್ತು ಲಕ್ಷ ಬೇಕು. ಒಂದುವರೆ ಕೋಟಿ ರೂಪಯಿಯ ಕಾರು ನನ್ನದು, ಅವನ ಗಾಡಿ ಸುಟ್ಟುಹಾಕಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದವರು ಅಕ್ಕ ಗಾಡಿ ತೆಗೀರಿ ಹೋಗೋಣ ಎಂದಿದ್ದಾರೆ. ಇದಕ್ಕೆ ಭವಾನಿ ರೇವಣ್ಣ ಅವರು ಗಾಡಿ ತಗೊಂಡು ಏನ್ ಮಾಡೋಣ ರೀಪೇರಿ ಮಾಡೋಕೆ ಐವತ್ತು ಲಕ್ಷ ಬೇಕು ಕೊಡ್ತೀಯಾ ನೀನು ? ದುಡ್ಡು ಕೊಡುವ ಹಾಗಿದ್ದರೆ ನ್ಯಾನ ಮಾಡೋಕೆ ಬನ್ನಿ ಎಂದು ಸಂಯಮ ಮೀರಿ ಮಾತನಾಡಿದ್ದಾರೆ.
ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಭವಾನಿ ರೇವಣ್ಣ ಅವರ ಆಕ್ರೋಶದ ನುಡಿಗಳನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಆ ಬಡಜೀವಕ್ಕಿಂತ ಇವರ ಕಾರೇ ಹೆಚ್ಚಾಯ್ತಾ ಸಾರ್ವಜನಿಕ ಜೀವನದಲ್ಲಿರುವ ಇರುವ ಇವರ ಈ ರೀತಿಯ ಮಾತುಗಳು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…