ಮೈಸೂರು : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ನೆನ್ನೆ ಕೆಆರ್ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ ಹೊರಟಿದ್ದ ವೇಳೆ ರಾಮಪುರ ಗೇಟ್ ಬಳಿ ಭವಾನಿ ರೇವಣ್ಣ ಅವರ ಕಾರಿಗೆ ಎದುರಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗ ಸ್ವಲ್ಪ ಸ್ಕ್ಯಾಚ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಬೈಕ್ ಸವಾರನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾಯುವ ಹಾಗಿದ್ದರೆ ಬಸ್ಸಿಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನೀನು ಸಾಯೋಕೆ ನನ್ನ ಕಾರೇ ಬೇಕಿತ್ತಾ ? ಡ್ಯಾಮೆಜ್ ಮಾಡೋಕೆ ನೀನ್ಯಾವೊನು. ಅವನು ಸತ್ರೆ ಸಾಯಲಿ. ನನ್ನ ಗಾಡಿ ಯಾರು ರಿಪೇರಿ ಮಾಡಿಸಿಕೊಡ್ತಾರೆ. ಈಗ ರಿಪೇರಿ ಮಾಡಿಸೋಕೆ ಐವತ್ತು ಲಕ್ಷ ಬೇಕು. ಒಂದುವರೆ ಕೋಟಿ ರೂಪಯಿಯ ಕಾರು ನನ್ನದು, ಅವನ ಗಾಡಿ ಸುಟ್ಟುಹಾಕಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದವರು ಅಕ್ಕ ಗಾಡಿ ತೆಗೀರಿ ಹೋಗೋಣ ಎಂದಿದ್ದಾರೆ. ಇದಕ್ಕೆ ಭವಾನಿ ರೇವಣ್ಣ ಅವರು ಗಾಡಿ ತಗೊಂಡು ಏನ್ ಮಾಡೋಣ ರೀಪೇರಿ ಮಾಡೋಕೆ ಐವತ್ತು ಲಕ್ಷ ಬೇಕು ಕೊಡ್ತೀಯಾ ನೀನು ? ದುಡ್ಡು ಕೊಡುವ ಹಾಗಿದ್ದರೆ ನ್ಯಾನ ಮಾಡೋಕೆ ಬನ್ನಿ ಎಂದು ಸಂಯಮ ಮೀರಿ ಮಾತನಾಡಿದ್ದಾರೆ.
ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಭವಾನಿ ರೇವಣ್ಣ ಅವರ ಆಕ್ರೋಶದ ನುಡಿಗಳನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಆ ಬಡಜೀವಕ್ಕಿಂತ ಇವರ ಕಾರೇ ಹೆಚ್ಚಾಯ್ತಾ ಸಾರ್ವಜನಿಕ ಜೀವನದಲ್ಲಿರುವ ಇರುವ ಇವರ ಈ ರೀತಿಯ ಮಾತುಗಳು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…