BREAKING NEWS

ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ಜಾತ್ಯತೀತ ಸಿದ್ದರಾಮಯ್ಯರಿಗಿದೆಯೇ? : ಬಿಜೆಪಿ

ಬೆಂಗಳೂರು : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ಜಾತ್ಯತೀತ ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ.

ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ,ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಗೆ ರಾಜ್ಯ ಸರ್ಕಾರದ ನೀತಿ, ವೈಫಲ್ಯಗಳೇ ಕಾರಣ. ಹಿಂದೂಗಳನ್ನು ಮುಗಿಸುತ್ತೇವೆ ಎಂದು ಹೇಳಿದ ಜಿಹಾದಿ ಸಂಘಟನೆಗಳಿಗೆ ಬೆಂಬಲವಾಗಿ ಕಾಂಗ್ರೆಸ್ ಸರ್ಕಾರ ನಿಂತಿರುವುದಕ್ಕೆ ಬೇರೇನು ಸಾಕ್ಷಿ ಬೇಕು. ಗಣೇಶ ಚತುರ್ಥಿಗೆ ಹಿಂದೂಗಳು ಸ್ಥಾಪಿಸುವ ಗಣಪತಿಗೆ ನೂರೆಂಟು ಅನುಮತಿ ಕೇಳುವ ಕೈ ಸರ್ಕಾರ, ಸಮಾಜದ ಶಾಂತಿ ಕದಡುವ ಇಂತಹ ಮೆರವಣಿಗೆಗಳಿಗೆ ಅನುಮತಿ ನೀಡಿದ್ದರ ಹಿನ್ನಲೆ ಏನು ಎಂದು ಪ್ರಶ್ನೆ ಮಾಡಿದೆ.

ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.

ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಿದ್ದು ಕಾರು, ಬೈಕ್, ಆಟೋಗಳು,ಹಲವು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಗಲಾಟೆಯಲ್ಲಿ ಮಹಿಳೆ, ಮಕ್ಕಳು ಸೇರಿ 7ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆ ಸೇರಿದ್ದಾರೆ. ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಘಟನೆಗೆ ಕರ್ನಾಟಕ ಬಿಜೆಪಿ ಖಂಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

lokesh

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

23 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

1 hour ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago