BREAKING NEWS

ಕಿಡಿಗೇಡಿತನ ಮಾಡುವುದು ಬಿಜೆಪಿಗರಿಗೆ ರಕ್ತದಲ್ಲೇ ಬಂದು ಬಿಟ್ಟಿದೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸವನ್ನ ಮೊದಲಿನಿಂದಲೂ ಬಿಜೆಪಿಗರು ಮಾಡಿಕೊಂಡು ಬಂದಿದ್ದಾರೆ ಎಂದಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದಾರೆ. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಹೆಸರು ಬದಲಿಸಿಕೊಂಡು ಭಾಗಿಯಾಗುತ್ತಾರೆ. ಇದೆಲ್ಲ ಅವರ ಹುಟ್ಟುಗುಣ, ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago