BREAKING NEWS

ವಿವಾಹ ನೋಂದಣಿ ವೇಳೆ ವಧು-ವರರ ಧರ್ಮ ಕೇಳಬೇಡಿ: ಕೇರಳ ಸರ್ಕಾರ ಆದೇಶ

ತಿರುವನಂತಪುರಂ (ಕೇರಳ): ವಿವಾಹ ನೋಂದಣಿ ವೇಳೆ ವಧು ಹಾಗೂ ವರನ ಧರ್ಮವನ್ನು ಕೇಳಬಾರದು ಎಂದು ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಕೇರಳ ರಾಜ್ಯ ಸರ್ಕಾರ ಆದೇಶ ನೀಡಿದೆ. ಕೇರಳ ರಾಜ್ಯದ ಎಲ್ಲ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳೂ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇರಳದ ಆಡಳಿತಾರೂಢ ಎಲ್‌ಡಿಎಫ್ ಸರ್ಕಾರ ಹೇಳಿದೆ.

ಧರ್ಮದ ಕಾರಣಕ್ಕಾಗಿ ವಿವಾಹ ನೋಂದಣಿ ರದ್ದಾಗಬಾರದು ಎಂದು ಸಿಎಂ ಪಿಣರಾಯಿ ವಿಜಯನ್ ಸರ್ಕಾರ ಹೇಳಿದೆ. ಕೇರಳ ರಾಜ್ಯ ಸರ್ಕಾರದ ಸ್ಥಳೀಯ ಆಡಳಿತ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಈ ರೀತಿಯ ಆದೇಶಕ್ಕೆ ಕಾರಣ ಏನು?

ಕೇರಳ ರಾಜ್ಯ ಸರ್ಕಾರದ ವಿರುದ್ಧ ಲಲನ್ ಪಿ. ಆರ್. ಹಾಗೂ ಆಯೆಷಾ ಎಂಬುವರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೇರೆ ಬೇರೆ ಧಾರ್ಮಿಕ ನಂಬಿಕೆ ಹೊಂದಿದ್ದ ಜೋಡಿಗಳ ವಿವಾಹಕ್ಕೆ ಕೊಚ್ಚಿನ್ ಸಹಕಾರ ಸಂಸ್ಥೆ ನಿರಾಕರಿಸಿತ್ತು. ವಿವಾಹ ನೋಂದಣಿಯನ್ನೂ ನಿರ್ವಹಿಸುವ ಈ ಸಂಸ್ಥೆ, ಜೋಡಿಗಳು ಅನ್ಯ ಧರ್ಮೀಯರಾದ ಕಾರಣ ವಿವಾಹಕ್ಕೆ ಸಮ್ಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನವ ಜೋಡಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಕೇರಳ ಹೈಕೋರ್ಟ್‌ ಕೂಡಾ ಜೋಡಿಗಳ ಪರವಾಗಿಯೇ ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ರಾಜ್ಯಾದ್ಯಂತ ಇರುವ ವಿವಾಹ ನೋಂದಣಿ ಕಚೇರಿಗಳು, ಜೋಡಿಗಳ ವಿವಾಹ ನೋಂದಣಿ ಮಾಡುವ ವೇಳೆ ಅವರ ಧಾರ್ಮಿಕ ನಂಬಿಕೆಗಳನ್ನು ಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಕೇವಲ ವಧು ವರರು ಮಾತ್ರವಲ್ಲ, ಅವರ ಪೋಷಕರ ಧರ್ಮವನ್ನೂ ಪರಿಶೀಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಅರ್ಹ ಜೋಡಿಗಳ ವಿವಾಹಕ್ಕೆ ಸಂಬಂಧಿಸಿದ ಇತರ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಎಲ್ಲಕ್ಕಿಂತಾ ಮುಖ್ಯವಾಗಿ ಜೋಡಿಗಳ ವಯಸ್ಸು ಹಾಗೂ ಸಾಕ್ಷಿಗಳ ಸಮ್ಮತಿ ಇದ್ದರೆ ಸಾಕು ಎಂದು ಸರ್ಕಾರ ಹೇಳಿದೆ.

ವಿವಾಹ ನೋಂದಣಿ ಮಾಡುವ ಸ್ಥಳೀಯ ಸಂಸ್ಥೆಗಳು, ರಿಜಿಸ್ಟ್ರಾರ್‌ ಜನರಲ್‌ಗಳು ಹಾಗೂ ಮುಖ್ಯ ರಿಜಿಸ್ಟ್ರಾರ್ ಜನರಲ್‌ಗಳೂ ಕೂಡಾ ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇರಳ ರಾಜ್ಯ ಸರ್ಕಾರದ ಸುತ್ತೋಲೆ ಹೇಳಿದೆ. ಈ ನಿಯಮಗಳನ್ನು ಯಾರಾದರೂ ಉಲ್ಲಂಘಿಸಿದರೆ ಅವರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳೋದಾಗಿ ಸರ್ಕಾರ ಹೇಳಿದೆ.

ಹಾಗೆ ನೋಡಿದ್ರೆ ಕೇರಳ ರಾಜ್ಯ ಸರ್ಕಾರ ಈ ಹಿಂದೆಯೇ ವಧು ಹಾಗೂ ವರರ ಧರ್ಮ ಕೇಳಬಾರದು ಎಂದು ಕಟ್ಟುನಿಟ್ಟಾಗಿ ಹೇಳಿತ್ತು. ಆದ್ರೆ, ಕೇರಳ ರಾಜ್ಯದ ಕೆಲವು ಸ್ಥಳೀಯ ಸಂಸ್ಥೆಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರಲಿಲ್ಲ. ವಿವಾಹ ನೋಂದಣಿ ವೇಳೆ ಮೊದಲಿಗೆ ಜಾತಿ ಹಾಗೂ ಧರ್ಮಗಳನ್ನು ಪರಿಶೀಲನೆ ಮಾಡುವ ಪರಿಪಾಠ ನಡೆದು ಬಂದಿತ್ತು.

ಕೇರಳ ರಾಜ್ಯದಲ್ಲಿ 2008ರಲ್ಲಿ ವಿವಾಹ ನೋಂದಣಿ ಕಾನೂನು ರೂಪಿಸಲಾಗಿತ್ತು. ವಿವಾಹ ನೋಂದಣಿ ಪ್ರಕ್ರಿಯೆ ವೇಳೆ ಯಾವುದೇ ಜಾತಿ ಹಾಗೂ ಧರ್ಮವನ್ನು ನೋಡದೆ ನೆರವೇರಿಸಬೇಕು ಎಂದು ಹೇಳಲಾಗಿತ್ತು. ಆದರೆ, ಲಲನ್ ಹಾಗೂ ಆಯೆಷಾ ಅವರ ಪ್ರಕರಣದಲ್ಲಿ 2008ರ ವಿವಾಹ ನೋಂದಣಿ ಕಾನೂನು ಪಾಲನೆ ಆಗಿಲ್ಲ ಎಂದು ಕೇರಳ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಪಿ. ವಿ. ಕುನ್ಹಿಕೃಷ್ಣನ್ ಅವರು ಅಭಿಪ್ರಾಯಪಟ್ಟಿದ್ದರು. ಈ ಕಾಯ್ದೆಯು ವಿವಾಹ ನೋಂದಣಿ ಮಾಡಿಸಲು ಅಷ್ಟೇ ಅಲ್ಲ, ಮಹಿಳೆ ಹಾಗೂ ಅವರಿಗೆ ಜನಿಸುವ ಮಕ್ಕಳ ಹಕ್ಕುಗಳ ರಕ್ಷಣೆಗೂ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.

ಅಂತಿಮವಾಗಿ ತನ್ನ ಆದೇಶದಲ್ಲಿ ಕೇರಳ ಹೈಕೋರ್ಟ್‌, 2008ರ ಕೇರಳ ರಾಜ್ಯ ಸರ್ಕಾರದ ವಿವಾಹ ನೋಂದಣಿ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸೂಚನೆ ನೀಡಿತ್ತು. ಅಧಿಕಾರಿಗಳು ವಿವಾಹ ನೋಂದಣಿ ವೇಳೆ ಸುಖಾಸುಮ್ಮನೆ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿತ್ತು. ಹೀಗಾಗಿ, ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ನೀಡುವಂತೆ ಕೇರಳ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದು, ಕಟ್ಟುನಿಟ್ಟಾಗಿ ಸರ್ಕಾರದ ಆದೇಶ ಪಾಲನೆ ಮಾಡುವಂತೆ ಹೇಳಿದ್ದಾರೆ.
andolanait

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago