ತಿರುವನಂತಪುರಂ (ಕೇರಳ): ವಿವಾಹ ನೋಂದಣಿ ವೇಳೆ ವಧು ಹಾಗೂ ವರನ ಧರ್ಮವನ್ನು ಕೇಳಬಾರದು ಎಂದು ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಕೇರಳ ರಾಜ್ಯ ಸರ್ಕಾರ ಆದೇಶ ನೀಡಿದೆ. ಕೇರಳ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳೂ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇರಳದ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ಹೇಳಿದೆ.
ಧರ್ಮದ ಕಾರಣಕ್ಕಾಗಿ ವಿವಾಹ ನೋಂದಣಿ ರದ್ದಾಗಬಾರದು ಎಂದು ಸಿಎಂ ಪಿಣರಾಯಿ ವಿಜಯನ್ ಸರ್ಕಾರ ಹೇಳಿದೆ. ಕೇರಳ ರಾಜ್ಯ ಸರ್ಕಾರದ ಸ್ಥಳೀಯ ಆಡಳಿತ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಕೇರಳ ರಾಜ್ಯ ಸರ್ಕಾರದ ವಿರುದ್ಧ ಲಲನ್ ಪಿ. ಆರ್. ಹಾಗೂ ಆಯೆಷಾ ಎಂಬುವರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೇರೆ ಬೇರೆ ಧಾರ್ಮಿಕ ನಂಬಿಕೆ ಹೊಂದಿದ್ದ ಜೋಡಿಗಳ ವಿವಾಹಕ್ಕೆ ಕೊಚ್ಚಿನ್ ಸಹಕಾರ ಸಂಸ್ಥೆ ನಿರಾಕರಿಸಿತ್ತು. ವಿವಾಹ ನೋಂದಣಿಯನ್ನೂ ನಿರ್ವಹಿಸುವ ಈ ಸಂಸ್ಥೆ, ಜೋಡಿಗಳು ಅನ್ಯ ಧರ್ಮೀಯರಾದ ಕಾರಣ ವಿವಾಹಕ್ಕೆ ಸಮ್ಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನವ ಜೋಡಿ ಕಳೆದ ವರ್ಷ ಅಕ್ಟೋಬರ್ನಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಕೇರಳ ಹೈಕೋರ್ಟ್ ಕೂಡಾ ಜೋಡಿಗಳ ಪರವಾಗಿಯೇ ತೀರ್ಪು ನೀಡಿತ್ತು.
ವಿವಾಹ ನೋಂದಣಿ ಮಾಡುವ ಸ್ಥಳೀಯ ಸಂಸ್ಥೆಗಳು, ರಿಜಿಸ್ಟ್ರಾರ್ ಜನರಲ್ಗಳು ಹಾಗೂ ಮುಖ್ಯ ರಿಜಿಸ್ಟ್ರಾರ್ ಜನರಲ್ಗಳೂ ಕೂಡಾ ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇರಳ ರಾಜ್ಯ ಸರ್ಕಾರದ ಸುತ್ತೋಲೆ ಹೇಳಿದೆ. ಈ ನಿಯಮಗಳನ್ನು ಯಾರಾದರೂ ಉಲ್ಲಂಘಿಸಿದರೆ ಅವರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳೋದಾಗಿ ಸರ್ಕಾರ ಹೇಳಿದೆ.
ಕೇರಳ ರಾಜ್ಯದಲ್ಲಿ 2008ರಲ್ಲಿ ವಿವಾಹ ನೋಂದಣಿ ಕಾನೂನು ರೂಪಿಸಲಾಗಿತ್ತು. ವಿವಾಹ ನೋಂದಣಿ ಪ್ರಕ್ರಿಯೆ ವೇಳೆ ಯಾವುದೇ ಜಾತಿ ಹಾಗೂ ಧರ್ಮವನ್ನು ನೋಡದೆ ನೆರವೇರಿಸಬೇಕು ಎಂದು ಹೇಳಲಾಗಿತ್ತು. ಆದರೆ, ಲಲನ್ ಹಾಗೂ ಆಯೆಷಾ ಅವರ ಪ್ರಕರಣದಲ್ಲಿ 2008ರ ವಿವಾಹ ನೋಂದಣಿ ಕಾನೂನು ಪಾಲನೆ ಆಗಿಲ್ಲ ಎಂದು ಕೇರಳ ಹೈಕೋರ್ಟ್ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಪಿ. ವಿ. ಕುನ್ಹಿಕೃಷ್ಣನ್ ಅವರು ಅಭಿಪ್ರಾಯಪಟ್ಟಿದ್ದರು. ಈ ಕಾಯ್ದೆಯು ವಿವಾಹ ನೋಂದಣಿ ಮಾಡಿಸಲು ಅಷ್ಟೇ ಅಲ್ಲ, ಮಹಿಳೆ ಹಾಗೂ ಅವರಿಗೆ ಜನಿಸುವ ಮಕ್ಕಳ ಹಕ್ಕುಗಳ ರಕ್ಷಣೆಗೂ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…