BREAKING NEWS

ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ, ಓಲೈಕೆ ರಾಜಕಾರಣವೇ ಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ

  • ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ

ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ.

ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು.

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ.

ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು ಯೋಜಿಸಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಮುಸ್ಲಿಂ ಸಂಘಟನೆಗಳ ಪ್ರಕರಣ ಹಿಂಪಡೆಯುವಿಕೆ, ಶಿವಮೊಗ್ಗ ಹಾಗೂ ಕೋಲಾರದ ಘಟನೆಗೆ ಕ್ರಮ ವಹಿಸದಿರುವುದು ಮೊದಲಾದವುಗಳಿಂದಾಗಿಯೇ ಇಂತಹ ಅನಾಹುತ ನಡೆಯುತ್ತಿದೆ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದೆ. ಪಾಕಿಸ್ತಾನ ಜಿಂದಾಬಾದ್ ಎಂದರೂ ಕಾಂಗ್ರೆಸ್ ಶಾಸಕರು ಅವರ ಪರವಾಗಿ ನಿಂತರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೂ ಇದು ತಿರುಚಿದ ವೀಡಿಯೋ ಎಂದಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎನ್ನುವ ಇವರು, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು.‌ ದಯವಿಟ್ಟು ರಾಜ್ಯದ ಘನತೆಗೆ ಧಕ್ಕೆ ತರದೆ ಭದ್ರತೆ ಬಗ್ಗೆ ಗಮನಹರಿಸಿ ಎಂದರು‌.

ಆಡಳಿತ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪದೇ ಪದೆ ಇಂತಹ ಘಟನೆ ನಡೆದಾಗ ಶಾಂತಿ‌ ಕದಡುತ್ತದೆ. ಕೂಡಲೇ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು.

ಗುಪ್ತಚರ ದಳ ಬದುಕಿದ್ದರೆ, ಸರ್ಕಾರ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ. ಮತ ರಾಜಕಾರಣ ಬಿಟ್ಟು ಕ್ರಮ ವಹಿಸಿ. ದೇಶದ್ರೋಹದ ಸಂದರ್ಭದಲ್ಲೂ ಎಚ್ಚರವಾಗದಿದ್ದರೆ ಜನರು ಕ್ಷಮಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಲೈಕೆ ರಾಜಕಾರಣ : ಈ ಘಟನೆ ನಡೆಯಲು ಓಲೈಕೆ ರಾಜಕಾರಣವೇ ಕಾರಣ. ಸರ್ಕಾರ ಕ್ರಮ ಕೈಗೊಳ್ಳಲು ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಆರ್.ಅಶೋಕ ತಿಳಿಸಿದರು.

andolana

Recent Posts

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

12 mins ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ನಿರ್ಮಿಸಿ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…

18 mins ago

ಓದುಗರ ಪತ್ರ:  ವಿಮಾ ವಲಯದಲ್ಲಿ ಶೇ.೧೦೦ ಎಫ್ಡಿಐ ಜನ ವಿರೋಧಿ

ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…

46 mins ago

ಓದುಗರ ಪತ್ರ: ಸಜ್ಜನ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…

52 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಂಚೆ ಚೀಟಿ ಮೂಲಕ ಟಿಪ್ಪು ಸುಲ್ತಾನ್ ವಂಶಸ್ಥೆಯನು ಗೌರವಿಸಿದ ಫ್ರಾನ್ಸ್‌

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ…

1 hour ago

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…

2 hours ago