BREAKING NEWS

ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ, ಓಲೈಕೆ ರಾಜಕಾರಣವೇ ಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ

  • ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ

ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ.

ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು.

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ.

ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು ಯೋಜಿಸಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಮುಸ್ಲಿಂ ಸಂಘಟನೆಗಳ ಪ್ರಕರಣ ಹಿಂಪಡೆಯುವಿಕೆ, ಶಿವಮೊಗ್ಗ ಹಾಗೂ ಕೋಲಾರದ ಘಟನೆಗೆ ಕ್ರಮ ವಹಿಸದಿರುವುದು ಮೊದಲಾದವುಗಳಿಂದಾಗಿಯೇ ಇಂತಹ ಅನಾಹುತ ನಡೆಯುತ್ತಿದೆ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದೆ. ಪಾಕಿಸ್ತಾನ ಜಿಂದಾಬಾದ್ ಎಂದರೂ ಕಾಂಗ್ರೆಸ್ ಶಾಸಕರು ಅವರ ಪರವಾಗಿ ನಿಂತರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೂ ಇದು ತಿರುಚಿದ ವೀಡಿಯೋ ಎಂದಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎನ್ನುವ ಇವರು, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು.‌ ದಯವಿಟ್ಟು ರಾಜ್ಯದ ಘನತೆಗೆ ಧಕ್ಕೆ ತರದೆ ಭದ್ರತೆ ಬಗ್ಗೆ ಗಮನಹರಿಸಿ ಎಂದರು‌.

ಆಡಳಿತ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪದೇ ಪದೆ ಇಂತಹ ಘಟನೆ ನಡೆದಾಗ ಶಾಂತಿ‌ ಕದಡುತ್ತದೆ. ಕೂಡಲೇ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು.

ಗುಪ್ತಚರ ದಳ ಬದುಕಿದ್ದರೆ, ಸರ್ಕಾರ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ. ಮತ ರಾಜಕಾರಣ ಬಿಟ್ಟು ಕ್ರಮ ವಹಿಸಿ. ದೇಶದ್ರೋಹದ ಸಂದರ್ಭದಲ್ಲೂ ಎಚ್ಚರವಾಗದಿದ್ದರೆ ಜನರು ಕ್ಷಮಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಲೈಕೆ ರಾಜಕಾರಣ : ಈ ಘಟನೆ ನಡೆಯಲು ಓಲೈಕೆ ರಾಜಕಾರಣವೇ ಕಾರಣ. ಸರ್ಕಾರ ಕ್ರಮ ಕೈಗೊಳ್ಳಲು ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಆರ್.ಅಶೋಕ ತಿಳಿಸಿದರು.

andolana

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago