ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ‘ಹುಲಿ ಯೋಜನೆಯ 50ನೇ ವರ್ಷದ ಆಚರಣೆ’ ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಬಹುದು. ಆದರೆ ವಾಸ್ತವ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.”50 ವರ್ಷಗಳ ಹಿಂದೆ ಬಂಡಿಪುರದಲ್ಲಿ ಆರಂಭಿಸಿದ ಹುಲಿ ಯೋಜನೆಗೆ ಪ್ರಧಾನಿ ಮೋದಿ ಅವರು ಇಂದು ಸಂಪೂರ್ಣ ಶ್ರೇಯಸ್ಸು ಪಡೆದುಕೊಳ್ಳಲಿದ್ದಾರೆ.
ಅವರು ಅದ್ಭುತ ವೀಕ್ಷಣೆಯ ಅನುಭವ ಪಡೆದುಕೊಳ್ಳಲಿದ್ದಾರೆ. ಆದರೆ ಪರಿಸರ, ಅರಣ್ಯಗಳು, ವನ್ಯಜೀವಿಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಜೀವಿಸುತ್ತಿರುವ ಮೂಲನಿವಾಸಿ ಜನರ ರಕ್ಷಣೆಗಾಗಿ ಮಾಡಿರುವ ಎಲ್ಲ ಕಾನೂನುಗಳನ್ನು ನಾಶಪಡಿಸುವ ಮೂಲಕ ಅವರು ಮತ್ತಷ್ಟು ತಮಾಷೆ ಮಾಡುತ್ತಿದ್ದಾರೆ. ಅವರು ಹೆಡ್ಲೈನ್ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ವಾಸ್ತವಾಂಶವು ಸಂಪೂರ್ಣವಾಗಿ ತದ್ವಿರುದ್ಧವಾಗಿದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಸಫಾರಿಯ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಕೂಡ ವ್ಯಂಗ್ಯವಾಡಿದೆ. ಬಂಡಿಪುರ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಕಾಂಗ್ರೆಸ್ ಸರ್ಕಾರ ಪರಿಚಯಿಸಿತ್ತು ಎಂದಿರುವ ಪಕ್ಷ, ರಾಷ್ಟ್ರೀಯ ಸಂಪತ್ತನ್ನು ಉದ್ಯಮಿ ಗೌತಮ್ ಅದಾನಿ ಅವರಿಗೆ ಮಾರಾಟ ಮಾಡಬೇಡಿ ಎಂದು ಹೇಳಿದೆ.”70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ” ಎನ್ನುವ ನರೇಂದ್ರ ಮೋದಿ ಅವರೇ, ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ. ಅದರ ಪರಿಣಾಮವೇ ಇಂದು ಹುಲಿಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ.
ತಮ್ಮಲ್ಲಿ ವಿಶೇಷ ಮನವಿ – ಬಂಡೀಪುರವನ್ನು ಅದಾನಿಗೆ ಮಾರಬೇಡಿ!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎನಿಸಿರುವ ನರೇಂದ್ರ ಮೋದಿ ಅವರು ಅಲ್ಲಿನ ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿರುವ ಮುಂಚೂಣಿ ಅರಣ್ಯ ಸಿಬ್ಬಂದಿ ಹಾಗೂ ಸ್ವ ಸಹಾಯ ಗುಂಪುಗಳ ಜತೆ ಸಂವಾದ ನಡೆಸಿದರು. ತಮಿಳುನಾಡಿನ ಮದುನಲೈ ಹುಲಿ ಸಂರಕ್ಷಣ ಅರಣ್ಯದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಅವರು ಮಾವುತ ಮತ್ತು ಕಾವಾಡಿಗಳ ಜತೆ ಕೂಡ ಸಂವಾದಿಸಿದರು.
ಮತ್ತಷ್ಟು ಯೋಜನೆಗಳನ್ನು ನೀಡಿ ಎಂದ ಸ್ಟಾಲಿನ್ : ತಮಿಳುನಾಡಿನಲ್ಲಿ ಶನಿವಾರ ಸಾರಿಗೆ ವಲಯಕ್ಕೆ ಸಂಬಂಧಿಸಿದಂತೆ ಸುಮಾರು 5,000 ಕೋಟಿ ರೂ ವೆಚ್ಚದ ಹೊಸ ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ ಅವರು, ಚೆನ್ನೈ- ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡಗಳನ್ನು ಉದ್ಘಾಟಿಸಿದ್ದರು. ಕೇಂದ್ರ ಸರ್ಕಾರದಿಂದ ತಮ್ಮ ರಾಜ್ಯಕ್ಕೆ ಮತ್ತಷ್ಟು ಯೋಜನೆಗಳನ್ನು ಹಂಚಿಕೆ ಮಾಡುವಂತೆ ಈ ಸಂದರ್ಭದಲ್ಲಿ ತಮಿಳುನಾಡಿ ಸಿಎಂ ಎಂಕೆ ಸ್ಟಾಲಿನ್ ಅವರು ಪ್ರಧಾನಿಗೆ ಮನವಿ ಮಾಡಿದರು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…