BREAKING NEWS

ಹಗುರ ಮಾತು ಬೇಡ ದಾಖಲೆ ಮುಂದಿಡಿ : ಮೋದಿಗೆ ಸಿದ್ದು ಸವಾಲ್

ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮದ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕವನ್ನ ಟಾರ್ಗೇಟ್ ಮಾಡ್ತಿದ್ದಾರೆ ಎಂಬ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿಯವರು ಪಾಪ ನಿರಾಶರಾಗಿದ್ದಾರೆ. ಮೋದಿಯವರು ರಾಜ್ಯಕ್ಕೆ 48 ಬಾರಿ ಬಂದ್ರಲ್ಲಾ ಅವರು ಹೋದ ಕಡೆಯಲ್ಲಾ ಸೋತ್ರು. ಎಲ್ಲೆಲ್ಲಿ ರೋಡ್ ಶೋ ಮಾಡಿದ್ರು, ಎಲ್ಲೆಲ್ಲಿ ಸಾರ್ವಜನಿಕ ಸಭೆ ಮಾಡಿದ್ರು, ಎಲ್ಲಾ ಕಡೆ ಸೋತು ಬಿಟ್ರು. ಹಾಗಾಗಿ ಇಲ್ಲಿಯವರೆಗೆ ವಿರೋದ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋಗ್ಲಿಲ್ಲಾ. ಅಂದ್ರೆ ಅಷ್ಟರಮಟ್ಟಿಗೆ ಬಿಜೆಪಿ ದಿವಾಳಿಯಾಗಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಡಿಸಿಎಂ ಸಿಎಂ ಲೂಟಿ ಮಾಡ್ತಿದ್ದಾರೆ ಎಂದು ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, 40% ಲೂಟಿ ಮಾಡ್ತಿದ್ದಾರೆ ಅಂತ ಹೇಳಿದ್ದು ಯಾರು? ಆಗ ಯಾವ ಸರ್ಕಾರ ಇತ್ತು. ಆಗ ನರೇಂದ್ರ ಮೋದಿ ಪಕ್ಷ ತಾನೆ ಇದ್ದಿದ್ದು. ನಮ್ಮ ಮೇಲೆ ಆ ತರ ಹೇಳಿದ್ರಾ? ಅದಕ್ಕೆ ನಾವೆಲ್ಲಾ ತನಿಖೆ ಮಾಡಿಸುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ಹೇಳಿದ್ದು ಯಾರಪ್ಪ ಯಾರ ಕಾಲದಲ್ಲಿ?, ಆಗ ಯಾವ ಸರ್ಕಾರ ಇತ್ತು?, ಈ ದೇಶದ ಪ್ರಧಾನಿಯಾಗಿ ಅದನ್ನು ಹೇಳಬೇಕಲ್ವಾ..? ಅವರಿಗೆ ಏನಾದ್ರು ದಾಖಲಾತಿ ಇದ್ರೆ ಹೇಳಲಿ. ಒಬ್ಬ ಪ್ರಧಾನಿಯಾಗಿದ್ದುಕೊಂಡು ಸುಳ್ಳುಗಳನ್ನು ಹೇಳಬಾರದು, ಲಘುವಾಗಿ ಮಾತಾನಾಡಬಾರದು. ಅವರಿಗೆ ದಾಖಲಾತಿ ಏನಾದ್ರು ಇದ್ರೆ ಅವರಿಗೆ ಐಬಿ,ರಾ, ಸಿಬಿಐ ಇಂಟೆಲಿಜೆನ್ಸಿ ಇದೆ ಹೇಳಲಿ. ಇವತ್ತು ದೇಶ ಆರ್ಥಿಕವಾಗಿ ದಿವಾಳಿಯಾಗಿದೆ ಎಂದರು.

ನಮ್ಮ ರಾಜ್ಯಕ್ಕೆ ಕೊಡಬೇಕಾಗಿರುವುದನ್ನೆ ಕೊಡೊಕ್ಕೆ ಆಗ್ತಿಲ್ಲಾ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಇನ್ನೂ ಕೂಡ ಅವರಿಗೆ ಬರಗಾಲದ ಪರಿಹಾರ ಕೊಡೋಕೆ ಆಗಿಲ್ಲಾ.ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾದ್ಯವಿಲ್ಲ ಅಂತಾ ಪ್ರಧಾನಿ ಮೋದಿ ಹೇಳಿದ್ರು. ಈಗ ಜಾರಿ ಮಾಡಿಲ್ವಾ ನಾವು ನಾನು ಈ ರೀತಿ ಸ್ಟೆಟ್ಮೆಂಟ್ ಕೊಡ್ತಾರೆ ಅಂತಾ ಎಕ್ಸೆಪ್ಟ್ ಮಾಡಿರಲಿಲ್ಲಾ. ಅವರಿಗೆ ಶೋಭೆ ತರುವಂತದಲ್ಲಾ ಇದು. ಮದ್ಯಪ್ರವೇಶದಲ್ಲಿ ಮಾಡಿರುವ ಎಲೆಕ್ಷನ್ ಭಾಷಣ ಅದು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

lokesh

Recent Posts

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

22 mins ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

58 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago