BREAKING NEWS

ಹಗುರ ಮಾತು ಬೇಡ ದಾಖಲೆ ಮುಂದಿಡಿ : ಮೋದಿಗೆ ಸಿದ್ದು ಸವಾಲ್

ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮದ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕವನ್ನ ಟಾರ್ಗೇಟ್ ಮಾಡ್ತಿದ್ದಾರೆ ಎಂಬ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿಯವರು ಪಾಪ ನಿರಾಶರಾಗಿದ್ದಾರೆ. ಮೋದಿಯವರು ರಾಜ್ಯಕ್ಕೆ 48 ಬಾರಿ ಬಂದ್ರಲ್ಲಾ ಅವರು ಹೋದ ಕಡೆಯಲ್ಲಾ ಸೋತ್ರು. ಎಲ್ಲೆಲ್ಲಿ ರೋಡ್ ಶೋ ಮಾಡಿದ್ರು, ಎಲ್ಲೆಲ್ಲಿ ಸಾರ್ವಜನಿಕ ಸಭೆ ಮಾಡಿದ್ರು, ಎಲ್ಲಾ ಕಡೆ ಸೋತು ಬಿಟ್ರು. ಹಾಗಾಗಿ ಇಲ್ಲಿಯವರೆಗೆ ವಿರೋದ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋಗ್ಲಿಲ್ಲಾ. ಅಂದ್ರೆ ಅಷ್ಟರಮಟ್ಟಿಗೆ ಬಿಜೆಪಿ ದಿವಾಳಿಯಾಗಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಡಿಸಿಎಂ ಸಿಎಂ ಲೂಟಿ ಮಾಡ್ತಿದ್ದಾರೆ ಎಂದು ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, 40% ಲೂಟಿ ಮಾಡ್ತಿದ್ದಾರೆ ಅಂತ ಹೇಳಿದ್ದು ಯಾರು? ಆಗ ಯಾವ ಸರ್ಕಾರ ಇತ್ತು. ಆಗ ನರೇಂದ್ರ ಮೋದಿ ಪಕ್ಷ ತಾನೆ ಇದ್ದಿದ್ದು. ನಮ್ಮ ಮೇಲೆ ಆ ತರ ಹೇಳಿದ್ರಾ? ಅದಕ್ಕೆ ನಾವೆಲ್ಲಾ ತನಿಖೆ ಮಾಡಿಸುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ಹೇಳಿದ್ದು ಯಾರಪ್ಪ ಯಾರ ಕಾಲದಲ್ಲಿ?, ಆಗ ಯಾವ ಸರ್ಕಾರ ಇತ್ತು?, ಈ ದೇಶದ ಪ್ರಧಾನಿಯಾಗಿ ಅದನ್ನು ಹೇಳಬೇಕಲ್ವಾ..? ಅವರಿಗೆ ಏನಾದ್ರು ದಾಖಲಾತಿ ಇದ್ರೆ ಹೇಳಲಿ. ಒಬ್ಬ ಪ್ರಧಾನಿಯಾಗಿದ್ದುಕೊಂಡು ಸುಳ್ಳುಗಳನ್ನು ಹೇಳಬಾರದು, ಲಘುವಾಗಿ ಮಾತಾನಾಡಬಾರದು. ಅವರಿಗೆ ದಾಖಲಾತಿ ಏನಾದ್ರು ಇದ್ರೆ ಅವರಿಗೆ ಐಬಿ,ರಾ, ಸಿಬಿಐ ಇಂಟೆಲಿಜೆನ್ಸಿ ಇದೆ ಹೇಳಲಿ. ಇವತ್ತು ದೇಶ ಆರ್ಥಿಕವಾಗಿ ದಿವಾಳಿಯಾಗಿದೆ ಎಂದರು.

ನಮ್ಮ ರಾಜ್ಯಕ್ಕೆ ಕೊಡಬೇಕಾಗಿರುವುದನ್ನೆ ಕೊಡೊಕ್ಕೆ ಆಗ್ತಿಲ್ಲಾ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಇನ್ನೂ ಕೂಡ ಅವರಿಗೆ ಬರಗಾಲದ ಪರಿಹಾರ ಕೊಡೋಕೆ ಆಗಿಲ್ಲಾ.ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾದ್ಯವಿಲ್ಲ ಅಂತಾ ಪ್ರಧಾನಿ ಮೋದಿ ಹೇಳಿದ್ರು. ಈಗ ಜಾರಿ ಮಾಡಿಲ್ವಾ ನಾವು ನಾನು ಈ ರೀತಿ ಸ್ಟೆಟ್ಮೆಂಟ್ ಕೊಡ್ತಾರೆ ಅಂತಾ ಎಕ್ಸೆಪ್ಟ್ ಮಾಡಿರಲಿಲ್ಲಾ. ಅವರಿಗೆ ಶೋಭೆ ತರುವಂತದಲ್ಲಾ ಇದು. ಮದ್ಯಪ್ರವೇಶದಲ್ಲಿ ಮಾಡಿರುವ ಎಲೆಕ್ಷನ್ ಭಾಷಣ ಅದು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

5 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

7 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

8 hours ago