BREAKING NEWS

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಿಸಲು ಸುಪ್ರೀಂಕೋರ್ಟ್ ಬಳಸದಿರಿ: ಸರ್ವೋಚ್ಛ ನ್ಯಾಯಾಲಯ ಚಾಟಿ

ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸುಪ್ರೀಂ ಕೋರ್ಟ್‌ಅನ್ನು ಬಳಸದಿರಿ ಎಂದು ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಸೋಮವಾರ ಚಾಟಿ ಬೀಸಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ಕಾಲಿನ್‌ ಗೊನ್ಸಾಲ್ವೆಸ್‌ ಅವರು ವಾದ ಮಂಡಿಸಿದರು.

ಈ ವೇಳೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು, “ಮಣಿಪುರ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂಕೋರ್ಟ್‌ಅನ್ನು ಬಳಕೆ ಮಾಡಿಕೊಳ್ಳದಿರಿ” ಎಂದು ಹೇಳಿದರು.

“ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಸುಪ್ರೀಂ ಕೋರ್ಟ್‌ ಗಮನಿಸಬಹುದು. ಹೆಚ್ಚುವರಿಯಾಗಿ ಯಾವುದಾದರೂ ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಬಹುದು. ಆದರೆ, ಯಾವುದೇ ರಾಜ್ಯದ ಆಡಳಿತವನ್ನು ಸುಪ್ರೀಂಕೋರ್ಟ್‌ ನೋಡಿಕೊಳ್ಳುವುದಿಲ್ಲ. ಮಣಿಪುರ ಕಾನೂನು ಮತ್ತು ಸುವ್ಯವಸ್ಥೆಯು ಸುಪ್ರೀಂಕೋರ್ಟ್‌ ಕೈಯಲ್ಲಿಲ್ಲ. ಹಾಗಾಗಿ, ನ್ಯಾಯಾಲಯವನ್ನು ಹಿಂಸಾಚಾರ ಹೆಚ್ಚಾಗಲು ಬಳಸಿಕೊಳ್ಳಬಾರದು” ಎಂದು ತಿಳಿಸಿದರು.

“ನಿಮ್ಮ ಬಳಿ ಸಕಾರಾತ್ಮಕ ವಿಷಯಗಳಿದ್ದರೆ, ಸಮಸ್ಯೆ ಬಗೆಹರಿಸಲು ಸಲಹೆಗಳಿದ್ದರೆ ಮಂಗಳವಾರದೊಳಗಾಗಿ ನಮಗೆ ಹೇಳಿ. ಅದನ್ನು ಪರಿಶೀಲಿಸಿ ಕೇಂದ್ರ ಹಾಗೂ ಮಣಿಪುರ ಸರ್ಕಾರಕ್ಕೆ ಸೂಚನೆಗಳ ನೀಡಲಾಗುವುದು. ಆದರೆ, ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುವುದು ಬೇಡ” ಎಂದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಮಣಿಪುರ ಹಿಂಸಾಚಾರವು ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಇದರ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುವುದು ಬೇಡ” ಎಂದರು.

ಈ ವೇಳೆ ನ್ಯಾಯಪೀಠವು, ರಾಜ್ಯ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಅಥವಾ ವೇತನ ಕಡಿತವನ್ನು ಎದುರಿಸುವಂತೆ ಜೂನ್‌ನಲ್ಲಿ ಹೊರಡಿಸಲಾದ ಸುತ್ತೋಲೆಯ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 11) ಮುಂದೂಡಿತು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago